ತೆಂಕನಿಡಿಯೂರು ಕುಮೆಕೆರೆ ಕಾಮಗಾರಿ: ಶಾಸಕ ಯಶ್ಪಾಲ್ ಸುವರ್ಣ ಪರಿಶೀಲನೆ

| Published : May 18 2025, 01:04 AM IST

ತೆಂಕನಿಡಿಯೂರು ಕುಮೆಕೆರೆ ಕಾಮಗಾರಿ: ಶಾಸಕ ಯಶ್ಪಾಲ್ ಸುವರ್ಣ ಪರಿಶೀಲನೆ
Share this Article
  • FB
  • TW
  • Linkdin
  • Email

ಸಾರಾಂಶ

ತೆಂಕನಿಡಿಯೂರು ಗ್ರಾಮದಲ್ಲಿ ಸುಮಾರು 4 ಕೋಟಿ ರು. ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಕುಮೆಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಇಲ್ಲಿನ ತೆಂಕನಿಡಿಯೂರು ಗ್ರಾಮದಲ್ಲಿ ಸುಮಾರು 4 ಕೋಟಿ ರು. ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಕುಮೆಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ತೆಂಕನಿಡಿಯೂರು ಗ್ರಾಮದ ಅತೀ ದೊಡ್ಡ ಕೆರೆಯಾಗಿರುವ ಕುಮೆಕೆರೆ ಅಭಿವೃದ್ಧಿ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಕೆರೆಯ ಸುತ್ತ ವಾಕಿಂಗ್ ಟ್ರ್ಯಾಕ್ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ. ಕೆರೆಯಲ್ಲಿ ಹಲವು ವರ್ಷಗಳಿಂದ ಹೂಳು ತೆರವು ಮಾಡದ ಕಾರಣ ಹೂಳು ತುಂಬಿದ್ದು, ಮಳೆಗಾಲದ ಬಳಿಕ ಹೂಳು ತೆರವಿಗೆ ಕ್ರಮ ವಹಿಸುವಂತೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಈ ಭಾಗದ ಜನರ ಬಹು ವರ್ಷದ ಬೇಡಿಕೆಯಾಗಿದ್ದ ಕುಮೆಕೆರೆ ಅಭಿವೃದ್ಧಿಯಿಂದ ಅಂತರ್ಜಲ ಮಟ್ಟ ವೃದ್ಧಿಸಲಿದ್ದು, ಕೃಷಿ ಚಟುವಟಿಕೆಗಳಿಗೂ ಸಹಕಾರಿಯಾಗಲಿದೆ ಎಂದರು.ಈ ಸಂದರ್ಭ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಅಭಿಯಂತರ ಸುಧಾಕರ ಶೆಟ್ಟಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಅರುಣ್ ಜತ್ತನ್, ಗ್ರಾಮ ಪಂಚಾಯಿತಿ ಸದಸ್ಯರಾದ ವಿನೋದ್ ಸುವರ್ಣ, ಸತೀಶ್ ಪೂಜಾರಿ ತೊಟ್ಟಂ, ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಸಾಲ್ಯಾನ್, ಗೌರವಾಧ್ಯಕ್ಷ ಪ್ರಭಾಕರ್ ಪೂಜಾರಿ, ಪ್ರಮುಖರಾದ ರಮೇಶ್ ತೊಟ್ಟಂ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.