ಒಳಮೀಸಲಾತಿ ವರ್ಗೀಕರಣ ವಿರೋಧಿಸಿ 6ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ

| Published : Oct 11 2025, 12:02 AM IST

ಒಳಮೀಸಲಾತಿ ವರ್ಗೀಕರಣ ವಿರೋಧಿಸಿ 6ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ
Share this Article
  • FB
  • TW
  • Linkdin
  • Email

ಸಾರಾಂಶ

ಹೋರಾಟದಲ್ಲಿ ಜಿಲ್ಲೆಯ ವಿವಿಧ ತಾಂಡಾಗಳ ಸಾವಿರಾರು ಜನರು ಭಾರೀ ಸಂಖ್ಯೆಯಲ್ಲಿ ಭಾಗವಹಿಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.

ಗದಗ: ಪರಿಶಿಷ್ಟ ಜಾತಿಗಳಲ್ಲಿನ ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣದ ವಿರುದ್ಧ ಕರ್ನಾಟಕ ಬಂಜಾರ ಹಕ್ಕು ಸಂರಕ್ಷಣಾ ಸಮಿತಿ ಹಾಗೂ ಜಿಲ್ಲಾ ಬಂಜಾರ ಸಮುದಾಯದ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಪ್ರಾರಂಭಿಸಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಶುಕ್ರವಾರ 6ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟದಲ್ಲಿ ಜಿಲ್ಲೆಯ ವಿವಿಧ ತಾಂಡಾಗಳ ಸಾವಿರಾರು ಜನರು ಭಾರೀ ಸಂಖ್ಯೆಯಲ್ಲಿ ಭಾಗವಹಿಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಜಿಲ್ಲೆಯ 72 ತಾಂಡಾಗಳ ಪೈಕಿ ತಮ್ಮ ವೇಳಾಪಟ್ಟಿಯಂತೆ ಗದಗ ತಾಲೂಕಿನ ಬೆಳದಡಿ, ಮುಂಡರಗಿ ತಾಲೂಕಿನ ಬಿಡನಾಳ, ಶಿರಹಟ್ಟಿ ತಾಲೂಕಿನ ಜಲ್ಲಿಗೇರಿ, ಲಕ್ಷ್ಮೇಶ್ವರ ತಾಲೂಕಿನ ಉಂಡೇನಹಳ್ಳಿ ಹಾಗೂ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ತಾಂಡಾಗಳ ನಿವಾಸಿಗಳು ಬೆಳಗ್ಗೆ 11ಕ್ಕೆ ಗದಗ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಸರ್ಕಾರದ ವಿರುದ್ಧ ಪೊರಕೆ ಚಳವಳಿ ನಡೆಸಿ, ಮೆರವಣಿಗೆಯಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಿದ್ದರು.

ಪ್ರತಿಭಟನಾಕಾರರು ಕಾಡು ಬೆಟ್ಟಗಳಲ್ಲಿ ದೊರೆಯುವ ಬಂಧರಕಿ ಮತ್ತು ಕಸಬರಿಗೆ ಸಸಿಗಳನ್ನು ಹಿಡಿದು, ರಸ್ತೆಯುದ್ದಕ್ಕೂ ಸ್ವಚ್ಛತೆ ನಡೆಸುತ್ತಾ ಪೊರಕೆ ಚಳವಳಿ ಮುಖಾಂತರ ಸರ್ಕಾರದ ಅವೈಜ್ಞಾನಿಕ ಒಳಮೀಸಲಾತಿ ನಿರ್ಧಾರವನ್ನು ಕೂಡಲೇ ಕೈ ಬಿಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರವಿಕಾಂತ ಅಂಗಡಿ, ಕೆ.ಸಿ. ನಭಾಪುರ, ಪರಮೇಶ ನಾಯಕ, ಚಂದು ನಾಯಕ, ಧನಸಿಂಗ್ ನಾಯಕ, ಈಶ್ವರ ನಾಯಕ, ಐ.ಎಸ್. ಪೂಜಾರ, ಟಿ.ಡಿ. ಪೂಜಾರ, ವಿಠಲ್ ತೋಟದ, ಮನೋಜ್ ಕಾರ್ಬಾರಿ, ಕುಬೇರಪ್ಪ ಪವಾರ, ಚಂದಪ್ಪ ಮಾನಪ್ಪ ಕಾರ್ಬಾರಿ, ನಾರಾಯಣ ವರ್ಜನಪ್ಪ ಪೂಜಾರ, ಥಾವರಪ್ಪ ಪೂಜಾರ, ಟಿಕಪ್ಪ ಧನಂಜಪ್ಪ ನಾಯಕ, ಕೇಶಪ್ಪ ಕಾರ್ಬಾರಿ, ದೇವಪ್ಪ ರಾಠೋಡ, ಈರಣ್ಣ ಚೌಹಾಣ, ಕೃಷ್ಣಪ್ಪ ಪೂಜಾರ, ಲಾಲಪ್ಪ ಪೂಜಾರ, ಚಂದಪ್ಪ ನಾಯಕ, ಮಂಜುನಾಥ ಕಾರಭಾರಿ, ಕುಮಾರ್ ಡಾವ, ಸಂತೋಷ ಲಮಾಣಿ, ಕೃಷ್ಣ ಲಮಾಣಿ, ಶಿವಪ್ಪ ನಾಯಕ, ಗಿರೀಶ ಕಟ್ಟಿಮಣಿ, ಕುಬೇರ್ ಪವಾರ್, ಭೀಮಸಿಂಗ್ ರಾಠೋಡ್, ಗಿರೀಶ ಕಾರಭಾರಿ, ಸಂತೋಷ ಪವಾರ ಸೇರಿದಂತೆ ಅನೇಕರು ಭಾಗವಹಿಸಿದ್ದರು.