ಸಾರಾಂಶ
ಕನ್ನಡಪ್ರಭ ವಾರ್ತೆ ಸಿಂದಗಿ
ರಾಷ್ಟ್ರೀಯ ಸ್ವಯಂ ಸಂಘದ ಶತಮಾನೋತ್ಸವದ ಅಂಗವಾಗಿ ಸಿಂದಗಿ ನಗರದಲ್ಲಿ ಗಣವೇಷಧಾರಿಗಳಿಂದ ಪಥಸಂಚಲನ ಅದ್ಧೂರಿಯಾಗಿ ಜರುಗಿತು.ಆರ್ಎಸ್ಎಸ್ ಪ್ರಾರ್ಥನಾ ಗೀತೆಯೊಂದಿಗೆ ಪಟ್ಟಣದ ಸಾರಂಗಮಠದಿಂದ ಗಣವೇಷಧಾರಿಗಳ ಭರ್ಜರಿ ಪಥ ಸಂಚಲನ ಪ್ರಾರಂಭಗೊಂಡಿತು. ಮಾಜಿ ವಿ.ಪ ಸದಸ್ಯ ಅರುಣ ಶಹಾಪುರ, ರಮೇಶ ಭೂಸನೂರ, ಮುತ್ತು ಶಾಬಾದಿ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಶಂಭುಲಿಂಗ ಕಕ್ಕಳಮೇಲಿ, ಸಂತೋಷ ಪಾಟೀಲ ಡಂಬಳ, ಅಶೋಕ ಅಲ್ಲಾಪುರ, ಪ್ರದೀಪ ದೇಶಪಾಂಡೆ, ಶೇಖರ ಪಾಟೀಲ, ಡಾ.ಗಿರೀಶ ಕುಲಕರ್ಣಿ, ಡಾ.ಸಿದ್ರಾಮ ಚಿಂಚೊಳ್ಳಿ ಸೇರಿದಂತೆ ಅನೇಕ ಗಣ್ಯರು ಗಣವೇಷಧಾರಿಗಳಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದು ಗಮನ ಸೆಳೆಯಿತು.ಸಾರಂಗಮಠದಿಂದ ಪ್ರಾರಂಭಗೊಂಡ ಪಥ ಸಂಚಲನ ಕನಕದಾಸ ವೃತ್ತ, ಹೆಗ್ಗೆರೇಶ್ವರ ದೇವಸ್ಥಾನ, ನೀಲಗಂಗಾ ದೇವಸ್ಥಾನ, ವಿವೇಕಾನಂದ ವೃತ್ತ, ತೋಂಟದ ಸಿದ್ದಲಿಂಗ ಶ್ರೀಗಳ ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಡಾ.ಎಂ.ಎಂ.ಕಲಬುರ್ಗಿ ರಸ್ತೆ ಮಾರ್ಗವಾಗಿ ಸಂಚರಿಸಿ ಆರ್.ಡಿ.ಪಾಟೀಲ ಕಾಲೇಜಿನ ಮೈದಾನದಲ್ಲಿ ಸಮಾಪ್ತಿಗೊಂಡಿತು.ಗಣವೇಷಧಾರಿಗಳ ಮೇಲೆ ಪುಷ್ಪವೃಷ್ಟಿ:
ಗಣವೇಷಧಾರಿಗಳ ಪಥ ಸಂಚಲನಕ್ಕೂ ಮುನ್ನ ಎಲ್ಲರ ಮನೆ ಮುಂದೆ ನೀರು ಹಾಕಿ ರಂಗೋಲಿ ಬಿಡಿಸಿ ಸಿಂಗರಿಸಲಾಗಿತ್ತು. ಪಥ ಸಂಚಲನ ಬರುತ್ತಿದ್ದಂತೆ ಸಾರ್ವಜನಿಕರು ಗಣವೇಷಧಾರಿಗಳ ಮೇಲೆ ಪುಷ್ಪವೃಷ್ಟಿಗೈದು ಗೌರವ ಸಲ್ಲಿಸಿದರು. ಪಥ ಸಂಚಲನದುದ್ದಕ್ಕೂ ಭಾರತ ಮಾತಾಕೀ ಜೈ ಎಂಬ ಘೋಷಣೆಗಳು ಮುಗಿಲು ಮುಟ್ಟಿದ್ದವು.ಪಥ ಸಂಚಲನದಲ್ಲಿ ಗಣವೇಷಧಾರಿಯಾಗಿ ಸಣ್ಣ ಮಕ್ಕಳು ಗಮನ ಸೆಳೆದರು. ಪುಟ್ಟ ಮಗುವೊಂದು ಗಣವೇಷ ಧರಿಸಿದ್ದು ವಿಶೇಷವಾಗಿತ್ತು. ಅದರಂತೆ ಕೆಲ ಮಕ್ಕಳು ಭಾರತಾಂಬೆ, ಸ್ವಾಮಿ ವಿವೇಕಾನಂದ, ಸಂಗೊಳ್ಳಿ ರಾಯಣ್ಣ, ಭಗತ್ಸಿಂಗ್, ರಾಮ-ಲಕ್ಷ್ಮಣ, ಸೀತೆ ಮತ್ತು ಹನುಮಂತರ ವೇಷಧರಿಸಿ ಗಮನ ಸೆಳೆದರು.ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಶನಿವಾರ ಸಿಂದಗಿಯಲ್ಲಿ ಹಮ್ಮಿಕೊಂಡ ಪಥ ಸಂಚಲನದ ಬಳಿಕ ನಡೆದ ಸ್ವಯಂ ಸೇವಕರ ಸಭೆಯಲ್ಲಿ ಪ್ರಾಂತ ಸಹ ಬೌದ್ಧಿಕ ಪ್ರಮುಖ ರಾಮಚಂದ್ರ ಎಡಕೆ ಮಾತನಾಡಿ, ಭಾರತ ವಿವಿಧತೆಯಲ್ಲಿ ಏಕತೆ ಹೊಂದಿದ ಸುಸಂಸ್ಕೃತ ಮತ್ತು ಮೌಲ್ಯಾಧಾರಿತ ದೇಶ. ಈ ಪುಣ್ಯ, ಪವಿತ್ರ ಭೂಮಿಯಲ್ಲಿ ಜನಿಸಿದ ಪ್ರತಿಯೊಬ್ಬ ಭಾರತೀಯನೂ ದೇಶಾಭಿಮಾನಿಯಾಗಿರಬೇಕು. ಈ ನಿಟ್ಟಿನಲ್ಲಿ ಇದು ಆರ್ಎಸ್ಎಸ್ ಸಂಕಲ್ಪ. ಯಾರೋ ಹೇಳಿದ ಮಾತ್ರಕ್ಕೆ ಸಂಗದ ಚಟುವಟಿಕೆಗಳು ನಿಲ್ಲುವುದಿಲ್ಲ. ಸಂಘದ ಕಾರ್ಯ ನಿತ್ಯ ನಿರಂತರವಾಗಿ ಭಾರತಾಂಬೆಯ ಸೇವೆಗೆ ಸಿದ್ದಾವಾಗಿದೆ ಎಂದು ಹೇಳಿದರು.ಹಿಂದೂ ರಾಷ್ಟ್ರದ ಪರಿಕಲ್ಪನೆಯನ್ನು ಜಾಗೃತಗೊಳಿಸುವ ಮತ್ತು ದೇಶವನ್ನು ವೈಭವದತ್ತ ಕೊಂಡೊಯ್ಯುವ ಗುರಿಯೊಂದಿಗೆ ಸಂಘ ಹುಟ್ಟಿಕೊಂಡಿದೆ. ಸಂಘಟನೆಯು ಯುವಕರನ್ನು ಶಾರೀರಿಕ, ಬೌದ್ಧಿಕ ಮತ್ತು ಮಾನಸಿಕ ಸದೃಢರನ್ನಾಗಿಸುವತ್ತ ಕಾರ್ಯನಿರ್ವಹಿಸುತ್ತದೆ. ಜಾತೀಯತೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಒಡಕು ಉಂಟಾಗಿದೆ. ಹಿಂದೂಗಳಾದ ನಾವು ನಮ್ಮ ವಿರುದ್ಧ ನಡೆಯುತ್ತಿರುವ ಪಿತೂರಿ ವಿರುದ್ಧ ಸಿಡಿದೇಳಬೇಕು ಎಂದು ಕರೆ ನೀಡಿದರು.ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಮಾತನಾಡಿ, ಸಂಸ್ಕಾರ, ಧರ್ಮ, ಸಂಪ್ರದಾಯ, ಸಂಸ್ಕೃತಿ ಇರುವ ಭಾರತದ ನಿರ್ಮಾಣಕ್ಕಾಗಿ ಎಲ್ಲರೂ ದುಡಿಯುವುದು ಅತ್ಯಗತ್ಯ. ಇಂದಿನ ಪಥ ಸಂಚಲನ ಸಿಂದಗಿ ಪಟ್ಟಣದಲ್ಲಿ ನಡೆದಿದ್ದು ಇತಿಹಾಸದ ಪುಠಗಳಲ್ಲಿ ಬರೆದಿಡುವಂತಾಗಿದೆ. ಮನಸ್ಸಿಗೆ ಖುಷಿ ತಂದಿದೆ ಎಂದು ಆಶೀರ್ವಚನ ನೀಡಿದರು. ಈ ವೇಳೆ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಸುನೀಲಕುಮಾರ ಬಳುಂಡಗಿ, ರಾಕೇಶ ಮಠ, ಅಶೋಕ ನೇಗಿನಾಳ, ಶರಣು ಉಪ್ಪಿನ, ಮಲ್ಲಿಕಾರ್ಜುನ ಅಲ್ಲಾಪುರ, ನವೀನ ಶಹಾಪುರ, ಮಲ್ಲು ಪೂಜಾರಿ, ಎಸ್.ಆರ್.ಪಾಟೀಲ, ಸಂದೀಪ, ಭಾಗೇಶ ಹೂಗಾರ, ಶೇಖರಗೌಡ ಹರನಾಳ, ಬಸನಗೌಡ ಪಾಟೀಲ, ಗುರುರಾಜ ದೇಸಾಯಿ, ರಾಕೇಶ ರಾಂಪೂರಮಠ, ಶಿವಾನಂದ ನಂದಿಕೋಲ, ಕೆ.ಪಿ.ಪೂಜಾರಿ, ಸುರೇಶ ಪಾಟೀಲ, ರಾಜು ಪಾಟೀಲ, ರಾಜು ಬಿರಾದಾರ, ನಂದೀಶ ನಂದರಗಿ, ಮುತ್ತು ಯಲಗಟ್ಟಿ ಸೇರಿದಂತೆ ಆರ್ಎಸ್ಎಸ್ ಕಾರ್ಯಕರ್ತರು ಭಾಗಹಿಸಿದ್ದರು.ಕೋಟ್ರಾಷ್ಟ್ರಕ್ಕಾಗಿ ಸರ್ವತ್ಯಾಗ ಸಮರ್ಪಣಾ ಮನೋಭಾವ ಜಾಗೃತಗೊಳಿಸುವ ಕಾರ್ಯವನ್ನು ಆರ್ಎಸ್ಎಸ್ ಮಾಡುತ್ತಿದೆ. ರಾಷ್ಟ್ರದಲ್ಲಿ ಅನೇಕ ವಿವಿಧ ವಿಕೋಪಗಳು ಬಂದಾಗ ಆರ್.ಎಸ್.ಎಸ್ ಸ್ವಯಂ ಪ್ರೇರಿತವಾಗಿ ಟೊಂಕ ಕಟ್ಟಿ ಕಾರ್ಯನಿರ್ವಹಿಸಿದೆ. ಕೆಲವರು ಸಂಘವನ್ನು ಬಹಿಷ್ಕರಿಸುವ ಮತ್ತು ಸಂಘದ ಚಟುವಟಿಕೆಗಳ ಮೇಲೆ ನಿರ್ಬಂಧಗಳನ್ನು ಹೇರುವ ಪ್ರಯತ್ನ ಮಾಡುತ್ತಿದ್ದಾರೆ. ಇದು ಯಾವ ಪುರುಷಾರ್ಥಕ್ಕಾಗಿ. ಸಂಘದ ಸರ್ವ ಚಟುವಟಿಕೆಗಳು ಭಾರತವನ್ನು ಜಗತ್ತಿಗೆ ಜಗದ್ಗುರುವನ್ನಾಗಿ ಮಾಡುವ ಮತ್ತು ಭಾರತದಲ್ಲಿ ಉತ್ತಮ ಸಂಸ್ಕಾರ, ಶಿಸ್ತು ನೀಡುವ ಕಾರ್ಯ ಮಾಡುತ್ತಿದೆ. ಇದರಿಂದ ಪ್ರತಿಯೊಬ್ಬ ವ್ಯಕ್ತಿಯ ಏಳಿಗೆ ಆಗುತ್ತದೆ.ರಾಮಚಂದ್ರ ಎಡಕೆ, ಪ್ರಾಂತ ಸಹ ಬೌದ್ಧಿಕ ಪ್ರಮುಖ