ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿ ಮುಕ್ತ ಕಥಾ ಸ್ಪರ್ಧೆ: ಕುಕ್ಕನೂರು ರೇಷ್ಮಾ ಮನೋಜ್ ಪ್ರಥಮ

| Published : Mar 17 2024, 02:04 AM IST

ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿ ಮುಕ್ತ ಕಥಾ ಸ್ಪರ್ಧೆ: ಕುಕ್ಕನೂರು ರೇಷ್ಮಾ ಮನೋಜ್ ಪ್ರಥಮ
Share this Article
  • FB
  • TW
  • Linkdin
  • Email

ಸಾರಾಂಶ

ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಮಾ. 19ರಂದು ನಡೆಯುವ ದತ್ತಿ ಕಾರ್ಯಕ್ರಮದಲ್ಲಿ ಪ್ರಶಂಸನಾ ಪತ್ರ ನೀಡಲಾಗುವುದು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದಿ. ಬಿ.ಎಸ್ ಗೋಪಾಲಕೃಷ್ಣ ದತ್ತಿ ಮುಕ್ತ ಕಥಾ ಸ್ಪರ್ಧೆಯಲ್ಲಿ ಜಿಲ್ಲೆಯ 23 ಕತೆಗಾರರು ಭಾಗವಹಿಸಿದ್ದು ತೀರ್ಪುಗಾರರು ಮೌಲ್ಯಮಾಪನ ಮಾಡಿ ನೀಡಿದ ಫಲಿತಾಂಶದಂತೆ ಪ್ರಥಮ ಸ್ಥಾನವನ್ನು ಕುಶಾಲನಗರದ ಕುಕ್ಕನೂರು ರೇಷ್ಮಾ ಮನೋಜ್, ದ್ವಿತೀಯ ಸ್ಥಾನವನ್ನು ನಾಪೋಕ್ಲಿನ ಮಧುಸೂಧನ್ ಬಿಳಿಗುಲಿ ಮತ್ತು ತೃತೀಯ ಸ್ಥಾನವನ್ನು ಮೂರ್ನಾಡಿನ ಕಿಗ್ಗಾಲು ಗಿರೀಶ್ ಅವರು ಪಡೆದುಕೊಂಡಿದ್ದಾರೆ.

ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಮಾ. 19 ರಂದು ನಡೆಯುವ ದತ್ತಿ ಕಾರ್ಯಕ್ರಮದಲ್ಲಿ ಪ್ರಶಂಸನಾ ಪತ್ರ ನೀಡಲಾಗುವುದು.ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಬಾಳೆಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ಶಕ್ತಿ ಪತ್ರಿಕೆಯ ಸಂಸ್ಥಾಪಕರಾದ ದಿ. ಜಿ ಗೋಪಾಲಕೃಷ್ಣ ದತ್ತಿನಿಧಿ ಕಾರ್ಯಕ್ರಮ ಹಾಗೂ ಮುಕ್ತ ಕಥಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಬಾಳೆಲೆಯ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಮಾ. 19ರಂದು ಬೆಳಗ್ಗೆ 10.30ಕ್ಕೆನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಳೆಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪಡಿಞಾರಂಡ ಪ್ರಭು ವಹಿಸಲಿದ್ದು ಉದ್ಘಾಟನೆಯನ್ನು ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಅಳಮೇಂಗಡ ಬೋಸ್ ಮಂದಣ್ಣ ನೆರವೇರಿಸಲಿದ್ದಾರೆ. ಪ್ರಾಸ್ತಾವಿಕವಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಕೇಶವ ಕಾಮತ್ ಮಾತನಾಡಲಿದ್ದಾರೆ.ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ ಹಾಗೂ ದತ್ತಿದಾನಿಗಳಾದ ಶಕ್ತಿ ದಿನ ಪತ್ರಿಕೆಯ ಸ್ಥಾನೀಯ ಸಂಪಾದಕ ಹಾಗೂ ಕೊಡಗು ಜಾನಪದ ಪರಿಷತ್ತಿನ ಅಧ್ಯಕ್ಷ ಬಿ ಜಿ ಅನಂತಶಯನ ಉಪಸ್ಥಿತರಿರುವರು.ಕಥಾ ರಚನಾ ಕೌಶಲ್ಯ ಕುರಿತು ಉಪನ್ಯಾಸವನ್ನು ವಿರಾಜಪೇಟೆಯ ಪತ್ರಕರ್ತೆ ಉಷಾ ಪ್ರೀತಂ ನೀಡಲಿದ್ದಾರೆ.ಮುಖ್ಯ ಅತಿಥಿಗಳಾಗಿ ಬಾಳೆಲೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಮತ್ತು ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿಯ ಗೌರವ ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣ ಗಣಪತಿ, ಬಾಳೆಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಮುಕ್ಕಾಟಿರ ಜಾನಕಿ ಕಾವೇರಪ್ಪ, ಬಾಳೆಲೆಯ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎನ್.ಕೆ.ಪ್ರಭು, ಬಾಳೆಲೆಯ ವಿಜಯಲಕ್ಷ್ಮಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೆ.ಚಂದ್ರಶೇಖರ್ ಭಾಗವಹಿಸಲಿದ್ದಾರೆ ಎಂದು ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಕೆ ವಿ ರಾಮಕೃಷ್ಣ ಮತ್ತು ಶೀಲಾ ಬೋಪಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.