ದೇಶದ ಭವಿಷ್ಯ ಅಡಗಿರುವುದೇ ಸರ್ಕಾರಿ ಶಾಲೆಗಳಲ್ಲಿ: ಪ್ರವೀಣ್ ಗೌಡ

| Published : Jun 19 2025, 11:50 PM IST / Updated: Jun 19 2025, 11:51 PM IST

ದೇಶದ ಭವಿಷ್ಯ ಅಡಗಿರುವುದೇ ಸರ್ಕಾರಿ ಶಾಲೆಗಳಲ್ಲಿ: ಪ್ರವೀಣ್ ಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಸ್ತುತ ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳು ಬದುಕಿನಲ್ಲಿ ಪ್ರಬುದ್ಧತೆ ಸಾಧಿಸುವಲ್ಲಿ ವಿಫಲರಾಗುತ್ತಿದ್ದಾರೆ. ಆದ್ದರಿಂದ ಮೊಬೈಲ್ ಬದಲು ಪುಸ್ತಕಗಳನ್ನು ಹಿಡಿಯಬೇಕು, ಜ್ಞಾನ ಸಂಪಾದಿಸಿ ಉತ್ತಮ ಭವಿಷ್ಯ ರೂಪಿಸಿಕೊಂಡು ದೇಶದ ಆಸ್ತಿಯಾಗಬೇಕು.

ಹಾಸನ: ದೇಶದ ಭವಿಷ್ಯ ಅಡಗಿರುವುದೇ ಸರ್ಕಾರಿ ಶಾಲೆಗಳಲ್ಲಿ, ಸರ್ಕಾರಿ ಶಾಲೆಗಳು ಅಭಿವೃದ್ಧಿಯಾಗಿ ಬಡ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆತಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಸಮಾಜ ಸೇವಕ ಪ್ರವೀಣ್ ಗೌಡ ಅಭಿಪ್ರಾಯಪಟ್ಟರು. ತಾಲೂಕು ಯಾರನೇ ಗ್ರಾಮ ಹಾಗೂ ಬಾಚಿಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಬುಕ್ ಹಾಗೂ ಬ್ಯಾಗ್ ವಿತರಿಸಿ ಮಾತನಾಡಿದ ಅವರು, ಪ್ರಸ್ತುತ ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳು ಬದುಕಿನಲ್ಲಿ ಪ್ರಬುದ್ಧತೆ ಸಾಧಿಸುವಲ್ಲಿ ವಿಫಲರಾಗುತ್ತಿದ್ದಾರೆ. ಆದ್ದರಿಂದ ಮೊಬೈಲ್ ಬದಲು ಪುಸ್ತಕಗಳನ್ನು ಹಿಡಿಯಬೇಕು, ಜ್ಞಾನ ಸಂಪಾದಿಸಿ ಉತ್ತಮ ಭವಿಷ್ಯ ರೂಪಿಸಿಕೊಂಡು ದೇಶದ ಆಸ್ತಿಯಾಗಬೇಕು. ಅಂದಾಗ ಮಾತ್ರ ಬದುಕಿನಲ್ಲಿ ಸಾರ್ಥಕತೆ ಕಾಣಲು ಸಾಧ್ಯ ಎಂದರು.

ಸರ್ಕಾರ ನೀಡುವ ಎಲ್ಲಾ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಂಡು ಉತ್ತಮ ರೀತಿಯ ಕಲಿಕೆಯಲ್ಲಿ ತೊಡಗಿಸಿಕೊಂಡಾಗ ಮಾತ್ರ ನಿಮ್ಮ ತಂದೆ- ತಾಯಿ ಪರಿಶ್ರಮಕ್ಕೆ ಸಾರ್ಥಕತೆ ಸಲ್ಲುತ್ತದೆ ಎಂದರು.

ಶಾಲಾ ಮುಖ್ಯ ಶಿಕ್ಷಕರು ಸೇರಿದಂತೆ ಪೋಷಕರು, ಮಕ್ಕಳು ಹಾಜರಿದ್ದರು.