ಮಂಡ್ಯಕ್ಕೆ ಹಸಿರು ಸಿರಿ ತೊಡಿಸಿದವರು ನಾಲ್ವಡಿ: ರಮೇಶ್‌ ಬಂಡಿಸಿದ್ದೇಗೌಡ

| Published : Jun 05 2025, 03:14 AM IST

ಮಂಡ್ಯಕ್ಕೆ ಹಸಿರು ಸಿರಿ ತೊಡಿಸಿದವರು ನಾಲ್ವಡಿ: ರಮೇಶ್‌ ಬಂಡಿಸಿದ್ದೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ನಾಲ್ವಡಿ ಅವರು ಜಿಲ್ಲೆಯ ಅಭಿವೃದ್ಧಿಗೆ ಕಾರಣಕರ್ತರು. ತಮ್ಮ ದೂರದೃಷ್ಟಿಯಿಂದ ಅಣೆಕಟ್ಟೆ ನಿರ್ಮಾಣ ಮಾಡಿದ್ದರಿಂದ ಇಂದು ನಾವು ಸಂತೋಷದಿಂದ ಜೀವನ ನಡೆಸುತ್ತಿದ್ದೇವೆ ಎಂದು ಸ್ಮರಿಸಿದರು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ದೂರದೃಷ್ಟಿ ಫಲದಿಂದಾಗಿ ಜಿಲ್ಲೆಯ ರೈತರು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ. ಮಂಡ್ಯಕ್ಕೆ ಹಸಿರ ಸಿರಿಯನ್ನು ತೊಡಿಸಿದವರು ರಾಜರ್ಷಿ ಎಂದು ಶಾಸಕ ಹಾಗೂ ಸೆಸ್ಕ್ ಅಧ್ಯಕ್ಷ ರಮೇಶಬಾಬು ಬಂಡಿಸಿದ್ದೇಗೌಡ ಬಣ್ಣಿಸಿದರು.

ತಾಲೂಕಿನ ಕೃಷ್ಣರಾಜಸಾಗರ ಅಣೆಕಟ್ಟೆ ಮುಂಭಾಗ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಅಂಗವಾಗಿ ಕಾವೇರಿ ನೀರಾವರಿ ನಿಗಮ ಹಾಗೂ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾತನಾಡಿದರು.

ನಾಲ್ವಡಿ ಅವರು ಜಿಲ್ಲೆಯ ಅಭಿವೃದ್ಧಿಗೆ ಕಾರಣಕರ್ತರು. ತಮ್ಮ ದೂರದೃಷ್ಟಿಯಿಂದ ಅಣೆಕಟ್ಟೆ ನಿರ್ಮಾಣ ಮಾಡಿದ್ದರಿಂದ ಇಂದು ನಾವು ಸಂತೋಷದಿಂದ ಜೀವನ ನಡೆಸುತ್ತಿದ್ದೇವೆ ಎಂದು ಸ್ಮರಿಸಿದರು.

ಈ ವೇಳೆ ಕಾವೇರಿ ನೀರಾವರಿ ನಿಗಮ ಕಾರ್ಯಪಾಲಕ ಅಭಿಯಂತರ ಜಯಂತ್, ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ತಾಪಂ ಕಾರ್ಯನಿರ್ವಹಣಾಧಿಕಾರಿ ವೇಣು, ಕೆ.ಆರ್.ಸಾಗರ ಗ್ರಾಪಂ ಅಧ್ಯಕ್ಷ ಜಯಂತಿ ಕಾಳಪ್ಪ, ಸಹಾಯಕ ಕಾರ್ಯಪಾಲಕ ಅಭಿಯಂತರ ಫಾರೂಕ್ ಅಭು, ಕಿಶೋರ್ ಕುಮಾರ್, ಜಯರಾಮ್, ರಶ್ಮಿ, ಲೋಹಿತ್, ಆರ್‌ಡಿಪಿಆರ್ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಮಕೃಷ್ಣೇಗೌಡ, ಲೆಕ್ಕ ಅಧೀಕ್ಷಕ ಕೆ.ಆರ್.ಶ್ರೀನಿವಾಸ್, ಕೆ.ಆರ್.ಸಾಗರ ಗ್ರಾಪಂ ಸದಸ್ಯರಾದ ಜಗದೀಪ್ ಸಿಂಗ್, ದೇವರಾಜು, ಮಾಜಿ ಅಧ್ಯಕ್ಷ ಎಂ.ಬಿ.ಕುಮಾರ್, ಕಾವೇರಿ ನೀರಾವರಿ ನಿಗಮದ ಅಭಿಯಂತರ ಲೋಹಿತ್‌ಕುಮಾರ್, ಪುನೀತ್, ಕುಮಾರಸ್ವಾಮಿ, ಅಭಿಲಾಷ್, ಶಿವಕುಮಾರ್, ಅಕಿಬ್ ಜಾವಿದ್, ಸಹನಾ, ರಾಜಸ್ವ ನಿರೀಕ್ಷಕ ರೇವಣ್ಣ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇತರರಿದ್ದರು.