ಸಾರಾಂಶ
‘ಜನ ಸ್ನೇಹಿ’ ಆಡಳಿತ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಇಲಾಖೆ ರೂಪಿಸಿರುವ ನೂತನ ಕಾರ್ಯಕ್ರಮ ‘ಮನೆ ಮನೆಗೆ ಪೊಲೀಸ್’ ಕುರಿತ ಕಿರು ಹೊತ್ತಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
‘ಜನ ಸ್ನೇಹಿ’ ಆಡಳಿತ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಇಲಾಖೆ ರೂಪಿಸಿರುವ ನೂತನ ಕಾರ್ಯಕ್ರಮ ‘ಮನೆ ಮನೆಗೆ ಪೊಲೀಸ್’ ಕುರಿತ ಕಿರು ಹೊತ್ತಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದ್ದಾರೆ.
ಈ ಕಾರ್ಯಕ್ರಮದಡಿ ಜನರ ಸಮಸ್ಯೆ ಆಲಿಸಲು ಮನೆ ಬಾಗಿಲಿಗೆ ಪೊಲೀಸರು ತೆರಳಲಿದ್ದಾರೆ. ಪ್ರಸ್ತುತ ಜನರ ದೂರುಗಳಿಗೆ ಮಾತ್ರ ಪೊಲೀಸರು ಪ್ರತಿಕ್ರಿಯಿಸಿ ಕ್ರಮ ಜರುಗಿಸುತ್ತಿದ್ದಾರೆ. ಆದರೆ ಇನ್ಮುಂದೆ ಪೊಲೀಸರೇ ಜನರ ಬಳಿಗೆ ತೆರಳುವುದರಿಂದ ನೊಂದವರಿಗೆ ತ್ವರಿತವಾಗಿ ನ್ಯಾಯ ಸಿಗಲಿದೆ ಎಂದು ಡಿಜಿಪಿ ಡಾ.ಎಂ.ಸಲೀಂ ಹೇಳಿದ್ದಾರೆ.ಈ ಕಾರ್ಯಕ್ರಮದಿಂದ ಆಗುವ ಬದಲಾವಣೆಗಳ ನಿರೀಕ್ಷೆ ಹೀಗಿದೆ.
1. ಅಪರಾಧ ತಡೆಗೆ ಪೊಲೀಸರಿಗೆ ಸಾರ್ವಜನಿಕರ ಸಹಕಾರ ಸಿಗಲಿದೆ.2. ಸಮುದಾಯ ಪೊಲೀಸ್ ವ್ಯವಸ್ಥೆ ಮೂಲಕ ಪೊಲೀಸ್ ಮತ್ತು ಜನರ ನಡುವೆ ವಿಶ್ವಾಸ ಮೂಡಿಸುವುದು.
3. ಸ್ಥಳೀಯರ ಸಹಕಾರದಿಂದ ಸಮುದಾಯದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಸ್ಥಾಪಿಸಲು ಸಹಕಾರಿಯಾಗಲಿದೆ.4. ಸಮುದಾಯ ಪೊಲೀಸ್ ವ್ಯವಸ್ಥೆಯ ಮೂಲಕ ಸ್ಥಳೀಯ ಮಟ್ಟದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗಲಿದೆ.5. ಜನರಲ್ಲಿ ಪೊಲೀಸರ ಕುರಿತ ಭಯವು ಹೋಗಿ ಸ್ನೇಹ ಮೂಡಬಹುದು.
6. ಸಾರ್ವಜನಿಕರಲ್ಲಿ ಕಾನೂನು ಹಾಗೂ ಅಪರಾಧ ತಡೆ ಬಗ್ಗೆ ಅರಿವು ಮೂಡುತ್ತದೆ.7. ಯುವಜನರನ್ನು ಸಕಾರಾತ್ಮಕ ಚಟುವಟಿಕೆಗಳತ್ತ ತೊಡಗಿಸಲು ಸಹಕಾರಿಯಾಗಲಿದೆ.8. ನಾಗರಿಕರು ಮತ್ತು ಪೊಲೀಸರು ಜವಾಬ್ದಾರಿ ಹಂಚಿಕೊಳ್ಳುವ ಮೂಲಕ ಉತ್ತಮ ವ್ಯವಸ್ಥೆ ನಿರ್ಮಾಣವಾಗುತ್ತದೆ.
9. ಸೈಬರ್ ಅಪರಾಧ, ನಕಲಿ ಮಾಹಿತಿ ಬಗ್ಗೆ ಜನರಿಗೆ ಶಿಕ್ಷಣ ನೀಡಿ ತಡೆಗಟ್ಟಬಹುದು.10. ವಿಪತ್ತುಗಳು ಅಥವಾ ತುರ್ತು ಸಂದರ್ಭದಲ್ಲಿ ಜನ ಸಹಕಾರದ ಮೂಲಕ ಪೊಲೀಸರು ಶೀಘ್ರದಲ್ಲಿ ಸಿಗಲಿದ್ದಾರೆ.