ಸಾರಾಂಶ
ಚಿಕ್ಕಮಗಳೂರು, ಜಿಲ್ಲೆಯಾದ್ಯಂತ ಡೆಂಘೀ ಪ್ರಕರಣಗಳು ಕಂಡು ಬರುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಸೀಮಾ ಸಲಹೆ ಮಾಡಿದರು.
ನಗರದ ಕೋಟೆ ಬಡಾವಣೆಯಲ್ಲಿ ನಡೆದ ಲಾರ್ವಾ ಸಮೀಕ್ಷೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲೆಯಾದ್ಯಂತ ಡೆಂಘೀ ಪ್ರಕರಣಗಳು ಕಂಡು ಬರುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಸೀಮಾ ಸಲಹೆ ಮಾಡಿದರು.ನಗರದ ಕೋಟೆ ಬಡಾವಣೆಯ ಮನೆಯೊಂದರಲ್ಲಿ ಆರೋಗ್ಯ ಇಲಾಖೆಯ ತಂಡ ನಡೆಸಿದ ಲಾರ್ವಾ ಸಮೀಕ್ಷೆ ವೇಳೆ ಭೇಟಿ ನೀಡಿ ಮಾತನಾಡಿದ ಅವರು, ಪ್ರತಿ ಮನೆಯ ಸುತ್ತಮುತ್ತ ಸೊಳ್ಳೆ ಉತ್ಪತ್ತಿ ಆಗುವಂತೆ ನೀರು ನಿಲ್ಲಲು ಬಿಡಬಾರದು. ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಪಡಿಸಬೇಕು. ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸಬೇಕು ಮತ್ತು ಜ್ವರ ಬಂದ ಸಂದರ್ಭದಲ್ಲಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆದುಕೊಳ್ಳುವಂತೆ ಮತ್ತು ಡೆಂಘೀ ನಿಯಂತ್ರಣ ಕ್ರಮ ಗಳನ್ನು ಅನುಸರಿಸುವಂತೆ ಸಲಹೆ ನೀಡಿದರು.ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಒಳಗೊಂಡಂತೆ ತಂಡಗಳನ್ನಾಗಿ ಮಾಡಿ ಲಾರ್ವಾ ಸಮೀಕ್ಷೆ ನಡೆಸ ಲಾಗುತ್ತಿದ್ದು, ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಬಗ್ಗೆ ಮತ್ತು ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಬಗ್ಗೆ ಅರಿವನ್ನು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜೆ.ಎನ್.ಬೇಬಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಯಣ್ಣ, ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ನವೀನ್ ಮತ್ತು ಶ್ರೀನಿಧಿ, ಪ್ರಾಥಮಿಕ ಆರೋಗ್ಯ ಸುರಕ್ಷಾತಾಧಿಕಾರಿಗಳಾದ ಚಂದನ ಮತ್ತು ವೀಣಾ ಭಾಗವಹಿಸಿದ್ದರು. 26 ಕೆಸಿಕೆಎಂ 1ಚಿಕ್ಕಮಗಳೂರಿನ ಕೋಟೆ ಬಡಾವಣೆ ಮನೆಯೊಂದರಲ್ಲಿ ಆರೋಗ್ಯ ಇಲಾಖೆಯ ತಂಡ ಲಾರ್ವಾ ಸಮೀಕ್ಷೆಯಲ್ಲಿ ತೊಡಗಿರುವುದು.