ಸಮಾಜ ಸುಧಾರಣೆಯಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದು: ಬಸವರಾಜ ಉಳ್ಳಾಗಡ್ಡಿ

| Published : Jul 31 2024, 01:06 AM IST

ಸಮಾಜ ಸುಧಾರಣೆಯಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದು: ಬಸವರಾಜ ಉಳ್ಳಾಗಡ್ಡಿ
Share this Article
  • FB
  • TW
  • Linkdin
  • Email

ಸಾರಾಂಶ

ನೈಜ ಮತ್ತು ನಿಷ್ಠುರತೆಯಿಂದ ವರದಿ ಮಾಡುವ ಮೂಲಕ ಸಮಾಜ ಸುಧಾರಣೆಯಲ್ಲಿ ಪತ್ರಕರ್ತರು ಅತ್ಯಂತ ಮಹತ್ವದ ಪಾತ್ರ ವಹಿಸಿದ್ದಾರೆ.

ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಕನ್ನಡಪ್ರಭ ವಾರ್ತೆ ಯಲಬುರ್ಗಾ

ನೈಜ ಮತ್ತು ನಿಷ್ಠುರತೆಯಿಂದ ವರದಿ ಮಾಡುವ ಮೂಲಕ ಸಮಾಜ ಸುಧಾರಣೆಯಲ್ಲಿ ಪತ್ರಕರ್ತರು ಅತ್ಯಂತ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಹೇಳಿದರು.

ಪಟ್ಟಣದ ಎಸ್.ಎ. ನಿಂಗೋಜಿ ಬಿಇಡಿ ಕಾಲೇಜಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಸಹಯೋಗದಲ್ಲಿ ನಡೆದ ಪತ್ರಿಕಾ ದಿನಾಚರಣೆ ಹಾಗೂ ಪತ್ರಕರ್ತರ ಐಡಿ ಕಾರ್ಡುಗಳ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ೪ನೇ ಅಂಗ ಪತ್ರಿಕೋದ್ಯಮವಾಗಿದ್ದು, ಸಾಮಾಜಿಕ ನ್ಯಾಯ ಹಾಗೂ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸುವಲ್ಲಿ ಪತ್ರಕರ್ತರ ಪರಿಶ್ರಮ ಅಪಾರವಾಗಿದೆ ಎಂದರು.

ಪಟ್ಟಣದಲ್ಲಿ ಈಗಾಗಲೇ ಪತ್ರಕರ್ತರ ಸಂಘಕ್ಕೆ ನೀಡಿದ ಹಳೇ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ. ಹಳೇ ಪಪಂ ಕಾರ್ಯಾಲಯದಲ್ಲಿ ಇದೀಗ ತಾತ್ಕಾಲಿಕವಾಗಿ ಸಂಘಕ್ಕೆ ಕಟ್ಟಡ ನೀಡಲಾಗಿದೆ. ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರಡ್ಡಿಯವರ ಗಮನಕ್ಕೆ ತಂದು ಸುಮಾರು ₹೧೦ಲಕ್ಷ ವೆಚ್ಚದಲ್ಲಿ ಅದೇ ಜಾಗದಲ್ಲಿ ಹೊಸ ಪತ್ರಿಕಾ ಭವನ ನಿರ್ಮಿಸಿಕೊಡುವಂತೆ ಚರ್ಚಿಸಿ ಸುಸಜ್ಜಿತ ಮಾದರಿ ಭವನ ನಿರ್ಮಾಣ ಮಾಡಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.

ತಹಸೀಲ್ದಾರ ಬಸವರಾಜ ತೆನ್ನಳ್ಳಿ, ತಾಪಂ ಇಒ ಸಂತೋಷ ಪಾಟೀಲ ಬಿರಾದಾರ ಮಾತನಾಡಿ, ಪ್ರಸ್ತುತ ವಿದ್ಯಮಾನಗಳ ಘಟನೆಗಳನ್ನು ಎಳೆಎಳೆಯಾಗಿ ಪತ್ರಿಕೆಗಳಲ್ಲಿ ಬಿತ್ತರಿಸುವ ಕಾಯಕದಲ್ಲಿ ಪತ್ರಕರ್ತರು ನಿಷ್ಠೆ, ಪ್ರಾಮಾಣಿಕತೆ ನಿಜಕ್ಕೂ ಮೆಚ್ಚುವಂಥದ್ದು ಎಂದರು.

ಬಿಜೆಪಿ ಮುಖಂಡ ವೀರಣ್ಣ ಹುಬ್ಬಳ್ಳಿ, ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಗೂಡ್ಲಾನೂರು, ರಾಜ್ಯ ಸಮಿತಿ ಸದಸ್ಯ ಎಚ್.ಎಸ್. ಹರೀಶ, ಎಂ. ಸಾದಿಕ ಅಲಿ, ಸಿಪಿಐ ಮೌನೇಶ್ವರ ಮಾಲಿಪಾಟೀಲ, ರಾಷ್ಟ್ರೀಯ ಸಮಿತಿ ಸದಸ್ಯ ಜಿ.ಎಸ್. ಗೋನಾಳ ಮಾತನಾಡಿದರು. ಇದೇ ವೇಳೆ ನಾನಾ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರನ್ನು ಸನ್ಮಾನಿಸಲಾಯಿತು.

ಹಿರಿಯ ಪತ್ರಕರ್ತ ವೀರಣ್ಣ ನಿಂಗೋಜಿ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಶಿವಮೂರ್ತಿ ಇಟಗಿ, ಪಿಎಸ್‌ಐ ವಿಜಯಪ್ರತಾಪ, ಮುಖ್ಯಾಧಿಕಾರಿ ನಾಗೇಶ, ನಿಂಗೋಜಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಸ್.ಎ. ನಿಂಗೋಜಿ, ಡಾ. ಶಿವನಗೌಡ ದಾನರಡ್ಡಿ, ಸುಧೀರ ಕೊರ್ಲಳ್ಳಿ, ಮಹೇಶ ಭೂತೆ, ಕಳಕಪ್ಪ ತಳವಾರ, ಶಿಕ್ಷಕರಾದ ಬಸವರಾಜ ಅಂಗಡಿ, ಮೆಹಬೂಬ ಬಾದಶಾಹ, ಪ್ರಧಾನ ಕಾರ್ಯದರ್ಶಿ ಮಲ್ಲು ಮಾಟರಂಗಿ, ಗೌರವಾಧ್ಯಕ್ಷ ಇಮಾಮಸಾಬ ಸಂಕನೂರು, ಕಾಲೇಜ ಸಿಬ್ಬಂದಿ ವೀರೇಶ ಹೊಣ್ಣೂರು, ಪತ್ರಕರ್ತರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಇದ್ದರು.