ಹೆರಿಗೆ ಸಮಯದಲ್ಲಿ ಶೂಶ್ರೂಷಕಿಯರ ಪಾತ್ರ ಪ್ರಮುಖ:ಡಾ.ಭಾಗ್ಯಶ್ರೀ ಬೆಂಡಿಗೇರಿ

| Published : May 20 2024, 01:35 AM IST

ಹೆರಿಗೆ ಸಮಯದಲ್ಲಿ ಶೂಶ್ರೂಷಕಿಯರ ಪಾತ್ರ ಪ್ರಮುಖ:ಡಾ.ಭಾಗ್ಯಶ್ರೀ ಬೆಂಡಿಗೇರಿ
Share this Article
  • FB
  • TW
  • Linkdin
  • Email

ಸಾರಾಂಶ

ಬಾಗಲಕೋಟೆಯ ಬಿವಿವಿಎಸ್ ವಿಜ್ಞಾನ ಮಹಾವಿದ್ಯಾಲಯದ ಪ್ರಸವ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಶುಶ್ರೂಷಕಿಯರ ದಿನಾಚರಣೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರದಲ್ಲಿ ಹಮ್ಮಿಕೊಳ್ಳಲಾಯಿತು.

ಕನ್ನಡಪ್ರಭ ವಾರ್ತೆ ಬಾಗಲಕೋಟೆಹೆರಿಗೆ ಸಮಯದಲ್ಲಿ ಶುಶ್ರೂಷಕಿಯರ ಪಾತ್ರ ಅತಿ ಮುಖ್ಯವಾಗಿದೆ. ಎಲ್ಲ ಸಂಪನ್ಮೂಲಗಳನ್ನು ಉಪಯೋಗಿಸಿಕೊಂಡು ತಾಯಿ ಮಗುವನ್ನು ಕಾಪಾಡುವುದು ಮುಖ್ಯ ಜವಾಬ್ದಾರಿಯಾಗಿದೆ ಎಂದು ಶಿರೂರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಭಾಗ್ಯಶ್ರೀ ಬೆಂಡಿಗೇರಿ ಹೇಳಿದರು.

ಶಿರೂರ ಪ್ರಾಥಮಿಕ ಆರೋಗ್ಯ ಕೇಂದ್ರ ದಲ್ಲಿ ಬಿ.ವಿ.ವಿ.ಎಸ್ ನರ್ಸಿಂಗ್ ವಿಜ್ಞಾನ ಮಹಾವಿದ್ಯಾಲಯದ ಪ್ರಸವ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಶುಶ್ರೂಷಕಿಯರ ದಿನಾಚರಣೆ ನಿಮಿತ್ತ ಮಕ್ಕಳ ಮತ್ತು ತಾಯಂದಿರ ಆರೋಗ್ಯದ ಮೇಲೆ ಹವಾಮಾನ ವೈಪರೀತ್ಯದ ಪರಿಣಾಮ ಪರಿಹಾರ ಮತ್ತು ಪ್ರಾಮುಖ್ಯತೆ ಎಂಬ ಶೀರ್ಷಿಕೆಯ ಅಡಿಯಲ್ಲಿ ಶುಶ್ರೂಷಕಿಯರ ಪಾತ್ರ ಅಲ್ಲದೆ, ತಾಯಿ ಮತ್ತು ಮಗುವಿನ ಸಂರಕ್ಷಣೆ ಅರಿವು ಮೂಡಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಿವಿವಿಎಸ್ ನರ್ಸಿಂಗ್ ವಿಜ್ಞಾನ ಮಹಾವಿದ್ಯಾಲಯದ ಪ್ರಸವ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಶರಣಮ್ಮ ಬಂಟನೂರ ಹವಾಮಾನ ವೈಪರೀತ್ಯದ ಪರಿಹಾರ ಹಾಗೂ ಪ್ರಸವ ಸಮಯದಿಂದ ಹೆರಿಗೆಯಾಗಿ 6 ತಿಂಳವರೆಗೆ ತಾಯಿ ಮಗುವನ್ನು ರಕ್ಷಿಸುವಲ್ಲಿ ಕುಟುಂಬಸ್ಥರ ಪಾತ್ರ ಪ್ರಮುಖವಾಗಿರುತ್ತದೆ. ಇವೆಲ್ಲ ಸಂಗತಿಗಳನ್ನು ಶುಶ್ರೂಷಕಿಯರು ಹಾಗೂ ಆಶಾ ಕಾರ್ಯಕರ್ತೆಯರು ಈ ಸಂದೇಶವನ್ನು ಎಲ್ಲರಿಗೂ ತಿಳಿಸಬೇಕು ಎಂದು ಹೇಳಿದರು.

ತೃತೀಯ ವರ್ಷದ ಡಿಪ್ಲೊಮಾ ನರ್ಸಿಂಗ್ ವಿದ್ಯಾರ್ಥಿಗಳು ಕಿರು ನಾಟಕದ ಮೂಲಕ ಹವಾಮಾನ ವೈಪರೀತ್ಯದ ಪರಿಹಾರದ ಬಗ್ಗೆ, ಶುಶ್ರೂಷಕಿಯರ ಮತ್ತು ಆಶಾಕರ್ಯಕರ್ತೆಯರ ಪಾತ್ರದ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ಹಿರಿಯ ಆರೋಗ್ಯ ನೀರಿಕ್ಷಣಾಧಿಕಾರಿ ಅಶೋಕ ಚಿತ್ತವಾಡಗಿ ಉಪಸ್ಥಿತರಿದ್ದರು. ಶಿರೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕಿಯರು ಹಾಗೂ ಆಶಾಕರ್ಯಕರ್ತೆಯರು ಪಾಲ್ಗೊಂಡಿದ್ದರು. ತೃತೀಯ ವರ್ಷದ ಡಿಪ್ಲೊಮಾ ನರ್ಸಿಂಗ್ ವಿದ್ಯಾರ್ಥಿ ಸಚೀನ ಕಾಳಗಿ ಸ್ವಾಗತಿಸಿದಳು. ಸಂಗೀತಾ ಹೆಳವರ ವಂದಿಸಿದಳು.