ಕರ್ನಾಟಕ ಸರ್ಕಾರ ನಡೆಸಿದ್ದ ಜಾತಿ ಗಣತಿ ಸಂಚಲನ - ಗಣತಿ ಲೆಕ್ಕಕ್ಕೆ ಲಿಂಗಾಯತರು, ಒಕ್ಕಲಿಗರು ಕಿಡಿ

| N/A | Published : Apr 14 2025, 01:22 AM IST / Updated: Apr 14 2025, 07:23 AM IST

Karnataka Chief Minister Siddaramaiah (File Photo/ANI)
ಕರ್ನಾಟಕ ಸರ್ಕಾರ ನಡೆಸಿದ್ದ ಜಾತಿ ಗಣತಿ ಸಂಚಲನ - ಗಣತಿ ಲೆಕ್ಕಕ್ಕೆ ಲಿಂಗಾಯತರು, ಒಕ್ಕಲಿಗರು ಕಿಡಿ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕ ಸರ್ಕಾರ ನಡೆಸಿದ್ದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ (ಜಾತಿಗಣತಿ) ಅಂಕಿ ಅಂಶಗಳು ತೀವ್ರ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

 ಬೆಂಗಳೂರು :  ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಜಾತಿ ಜನಗಣತಿ ವರದಿ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಚಿವರುಗಳಿಂದ ಅಭಿಪ್ರಾಯ ಮಂಡನೆಯಾಗಲಿದೆ. ಅಷ್ಟರೊಳಗೆ ಪ್ರಮುಖ ಮುಖಂಡರು, ಮಠಾಧೀಶರು, ಸಚಿವ, ಶಾಸಕರ ಸಭೆ ನಡೆಸಿ ಈ ವರದಿ ಬಗ್ಗೆ ತಮ್ಮ ಸ್ಪಷ್ಟ ಅಭಿಪ್ರಾಯ ಹೊರಹಾಕಲು ವೀರಶೈವ ಲಿಂಗಾಯತ, ಒಕ್ಕಲಿಗ ಸೇರಿ ವಿವಿಧ ಸಮುದಾಯಗಳ ಸಂಘಟನೆಗಳು ಮುಂದಾಗಿವೆ. ಸರ್ಕಾರ ಪ್ರತಿಕೂಲ ನಿರ್ಧಾರ ಕೈಗೊಂಡರೆ ಹೋರಾಟಕ್ಕಿಳಿಯುವ ಸಾಧ್ಯತೆ ಇದೆ.

ಈಗಾಗಲೇ ಜಾತಿ ಜನಗಣತಿ ವರದಿ ವೈಜ್ಞಾನಿಕವಾಗಿ ನಡೆದಿಲ್ಲ ಎಂದು ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳು ವಿರೋಧ ವ್ಯಕ್ತಪಡಿಸಿವೆ. ಆದರೂ ವರದಿ ಈಗ ಅಧಿಕೃತವಾಗಿ ಬಹಿರಂಗವಾಗಿರುವ ಹಿನ್ನೆಲೆಯಲ್ಲಿ ಸಮುದಾಯದ ಎಲ್ಲ ಪ್ರಮುಖರೊಂದಿಗೆ ಸಭೆ ನಡೆಸಿ ಒಮ್ಮತದ ಸ್ಪಷ್ಟ ನಿಲುವು ತಳೆಯಲು ಶೀಘ್ರ ಪ್ರತ್ಯೇಕ ಸಭೆ ಆಯೋಜಿಸಲು ಚಿಂತನೆ ನಡೆಸಿವೆ ಎಂದು ಮೂಲಗಳು ತಿಳಿಸಿವೆ.ತನ್ಮೂಲಕ ಸಮುದಾಯದ ನಿಲುವನ್ನು ತಮ್ಮ ಸಮುದಾಯದ ಸಚಿವರ ಮೂಲಕ ಸರ್ಕಾರಕ್ಕೆ ತಲುಪಿಸುವುದು ಇದರ ಉದ್ದೇಶ. ಅಲ್ಲದೆ, ಸಮುದಾಯದ ನಿಲುವು, ಅಭಿಪ್ರಾಯಕ್ಕೆ ವಿರುದ್ಧವಾಗಿ ಸರ್ಕಾರ ಯಾವುದೇ ನಿರ್ಧಾರಕ್ಕೆ ಬಂದರೆ ಹೋರಾಟಕ್ಕಿಳಿಯುವ ಎಚ್ಚರಿಕೆಯನ್ನೂ ರವಾನಿಸುವ ಪ್ರಯತ್ನವೂ ನಡೆಯಲಿದೆ ಎಂದು ತಿಳಿದು ಬಂದಿದೆ.

ಈ ನಿಟ್ಟಿನಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾವು ಮಂಗಳವಾರ ಅಥವಾ ಬುಧವಾರ ಸಭೆ ನಡೆಸುವ ತಯಾರಿ ನಡೆಸಿದೆ. ಸಭೆಯಲ್ಲಿ ಮಹಾಸಭಾದ ಪದಾಧಿಕಾರಿಗಳ ಜೊತೆಗೆ ಸಮುದಾಯದ ಎಲ್ಲಾ ಪ್ರಮುಖ ಮುಖಂಡರಿಗೆ ಆಹ್ವಾನ ನೀಡಲಿದೆ. ಸದ್ಯದ ಸಭೆಗೆ ಸಮುದಾಯದ ಮಠಗಳ ಮಠಾಧೀಶರಿಗೆ ಆಹ್ವಾನ ನೀಡುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ನಂತರದ ದಿನಗಳಲ್ಲಿ ಮಠಾಧೀಶರನ್ನೂ ಒಳಗೊಂಡು ಸಭೆಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ.ಮಠಾಧೀಶರ ಸಭೆ: ಇನ್ನು, ರಾಜ್ಯ ಒಕ್ಕಲಿಗರ ಸಂಘ ಕೂಡ ಸಮುದಾಯದ ಮುಖಂಡರು ಹಾಗೂ ಮಠಾಧೀಶರ ಸಭೆ ಆಯೋಜಿಸಲು ಸೋಮವಾರ ಸಮಯ ನಿಗದಿಪಡಿಸುವ ಸಾಧ್ಯತೆ ಇದೆ. ಸೋಮವಾರ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಜೀರ್ಣೋದ್ಧಾರಗೊಂಡಿರುವ ಮೂರು ದೇವಾಲಯಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಮುದಾಯದ ಮಠಾಧಿಪತಿಗಳು, ಮುಖಂಡರು ಪಾಲ್ಗೊಳ್ಳುತ್ತಿರುವುದರಿಂದ ಆ ನಂತರ ಎಲ್ಲರೊಂದಿಗೆ ಚರ್ಚಿಸಿ ಸಮಯ ನಿಗದಿಪಡಿಸಲು ಸಂಘದ ಪದಾಧಿಕಾರಿಗಳು ನಿರ್ಧರಿಸಿದ್ದಾರೆ.

ಅದೇ ರೀತಿ ಇನ್ನು ಕೆಲ ಸಮುದಾಯಗಳ ಸಂಘಟನೆಗಳು ಕೂಡ ತಮ್ಮ ತಮ್ಮ ಸಮುದಾಯದ ಮುಖಂಡರು, ಮಠಾಧೀಶರು, ಪ್ರಮುಖರೊಂದಿಗೆ ಮುಂದಿನ ಸಚಿವ ಸಂಪುಟ ಸಭೆ ನಡೆಯುವ ಗುರುವಾರದೊಳಗೆ ಸಭೆ ಆಯೋಜಿಸಿ ಸರ್ಕಾರಕ್ಕೆ ಜಾತಿ ಗಣತಿ ವರದಿ ಕುರಿತು ತಮ್ಮ ಸಮುದಾಯದ ನಿಲುವೇನು ಎನ್ನುವ ಸಂದೇಶವನ್ನು ಸಮುದಾಯದ ಸಚಿವರು, ಮುಖಂಡರ ಮೂಲಕ ತಲುಪಿಸುವ ಲೆಕ್ಕಾಚಾರ ನಡೆಸಿವೆ.

ಕರ್ನಾಟಕ ಸರ್ಕಾರ ನಡೆಸಿದ್ದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ (ಜಾತಿಗಣತಿ) ಅಂಕಿ ಅಂಶಗಳು ತೀವ್ರ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಈ ಅಂಕಿ ಅಂಶ ಸೂಕ್ತವಾಗಿಲ್ಲ ಎಂಬ ಕಾರಣ ನೀಡಿ ಹಲವು ಜಾತಿ ಸಂಘಟನೆಗಳು ಹೋರಾಟದ ಚಿಂತನೆ ನಡೆಸುತ್ತಿವೆ. ಸ್ವತಃ ಕೆಲವು ಕಾಂಗ್ರೆಸ್ಸಿಗರೂ ಗಣತಿ ಲೆಕ್ಕದ ಬಗ್ಗೆ ಅಪಸ್ವರ ಎತ್ತಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಹೇಳಿದ್ದು, ಎಚ್ಚರಿಕೆಯ ಹೆಜ್ಜೆ ಇರಿಸಿದೆ.

ಜಾತಿಗಣತಿ ಅಧಿಕಾರಕೇಂದ್ರ ಸರ್ಕಾರಕ್ಕೆ ಮಾತ್ರಜಾತಿ ಗಣತಿ ಮಾಡುವ ಹಕ್ಕು ರಾಜ್ಯ ಸರ್ಕಾರಗಳಿಗಿಲ್ಲ. ಅದೇನಿದ್ದರೂ ಕೇಂದ್ರ ಸರ್ಕಾರ ಮಾಡಬೇಕು. ರಾಜ್ಯ ಸರ್ಕಾರದ ಜಾತಿಗಣತಿ ವರದಿ ವೈಜ್ಞಾನಿಕವಾಗಿಲ್ಲ. ಮೊದಲು ವೈಜ್ಞಾನಿಕವಾಗಿ ಅಧ್ಯಯನ ಮಾಡಲಿ. ಜಾತಿ ಗಣತಿಯನ್ನು ಕಾಂಗ್ರೆಸ್‌ ಮತಬ್ಯಾಂಕ್ ಗಾಗಿ ಬಳಸಿಕೊಳ್ಳುತ್ತಿದೆ. ವರದಿ ಬಗ್ಗೆ ಕಾಂಗ್ರೆಸ್‌ ನಾಯಕರಲ್ಲೇ ಒಮ್ಮತವಿಲ್ಲ.

- ಪ್ರಹ್ಲಾದ ಜೋಶಿ, ಕೇಂದ್ರ ಸಚಿವ

ವರದಿ ಜಾರಿಗೆ ಆತುರದ

ನಿರ್ಧಾರ ಮಾಡಲ್ಲಜಾತಿಗಣತಿ ವರದಿ ಕುರಿತು ಸರ್ಕಾರ ಆತುರದ ನಿರ್ಧಾರ ಮಾಡಲ್ಲ. ಈ ಬಗ್ಗೆ ಪ್ರಜ್ಞಾಪೂರ್ವಕ ನಿಲುವನ್ನು ಸರ್ಕಾರ ಹೊಂದಿದೆ. ವರದಿಯ ಬಗ್ಗೆ ಕೆಲವರು ರಾಜಕೀಯ ಹೇಳಿಕೆ ನೀಡುತ್ತಿರಬಹುದು. ಕೇವಲ ಒಂದು ಸಮುದಾಯಕ್ಕೆ ಅಲ್ಲ, ಎಲ್ಲರಿಗೂ ನ್ಯಾಯ ಒದಗಿಸುವುದು ನನ್ನ ಹೊಣೆ. ಸರ್ಕಾರ ಸತ್ಯ ಅರಿತು ಎಲ್ಲರಿಗೂ ನ್ಯಾಯ ಒದಗಿಸುತ್ತದೆ.- ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ

ಲಿಂಗಾಯತರ ಸಂಖ್ಯೆ 75 ಲಕ್ಷ ಅಲ್ಲ, 1 ಕೋಟಿ

ಲಿಂಗಾಯತರ ಜನಸಂಖ್ಯೆ 75 ಲಕ್ಷ ಅಲ್ಲ, 1 ಕೋಟಿ ದಾಟುತ್ತದೆ. ಹಿಂದೂ ಸಾದರ, ಹಿಂದೂ ಗಾಣಿಗ, ಹಿಂದೂ ಬಣಜಿಗ ಸಮುದಾಯಗಳು ಒಳಗೊಂಡರೆ ಲಿಂಗಾಯತ ಸಮಾಜದ ಸಂಖ್ಯೆ 1 ಕೋಟಿಗೂ ಅಧಿಕವಾಗುತ್ತದೆ. ಈ ಕುರಿತು ನಾನು ಏ.17ರ ಸಂಪುಟ ಸಭೆಯಲ್ಲಿ ಮಾತನಾಡುವೆ. ಮುಖ್ಯಮಂತ್ರಿಗೆ ನನ್ನ ಅಭಿಪ್ರಾಯ ತಿಳಿಸುತ್ತೇನೆ.

- ಎಂ.ಬಿ. ಪಾಟೀಲ, ಭಾರಿ ಕೈಗಾರಿಕೆ ಸಚಿವ