ಸಾರಾಂಶ
ಕನ್ನಡಪ್ರಭ ವಾರ್ತೆ ಹೊಳೆನರಸೀಪುರ
ಕಮಿಷನರ್ ಆಫೀಸ್, ಕೆಳಗಿನ ಪೊಲೀಸ್ ಅಧಿಕಾರಿಗಳು ಅನುಮತಿ ನೀಡಿದ್ರಾ, ಬೇಡ ಅಂದ್ರು ಏಕೆ ಹೋದರು, ಸಾಕಷ್ಟು ಗೊಂದಲಗಳಿವೆ, ಸಿಐಡಿ, ಸಿಒಡಿ ತನಿಖೆ ಮಾಡ್ತಾರೆ, ವರದಿ ಬಳಿಕ ಸತ್ಯಾಂಶ ಹೊರಗೆ ಬರುತ್ತೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.ಪಟ್ಟಣದಲ್ಲಿ ಸಂಸದ ಶ್ರೇಯಸ್ ಎಂ.ಪಟೇಲ್ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಂಟಾದ ಭೀಕರ ಕಾಲ್ತುಳಿತ ಪ್ರಕರಣ ಸಂಬಂಧ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಮಾತನಾಡಿದರು. ಸ್ಟೇಡಿಯಂಗೆ ಹೋಗುವ ಮುಂಚೆ ಡೆತ್ ಆಗಿದ್ರೆ ಸಿಎಂಗೆ, ಸರ್ಕಾರಕ್ಕೆ ಹೇಳಬೇಕಾದದ್ದು ಪೊಲೀಸರ ಕರ್ತವ್ಯ, ಜವಾಬ್ದಾರಿ, ಜತೆಗೆ ಮುಖ್ಯಮಂತ್ರಿಗಳಿಗೆ ಮುಂಚೆಯೇ ಹೇಳಬೇಕಿತ್ತು, ಯಾಕೆ ಹೇಳಿಲ್ಲ ಎಂದು ಪ್ರಶ್ನಿಸಿ, ಇದು ಪೊಲೀಸರ ಮೇಲೆ ಬಂದ ಪ್ರಶ್ನೆಯಾಗಿದೆ. ಇದರ ಬಗ್ಗೆ ಸಿಐಡಿ, ಸಿಒಡಿ ಇನಿಖೆ ನಡೆಸಿದ ನಂತರ ಭೀಕರ ಕಾಲ್ತುಣಿತ ಪ್ರಕರಣದ ಬಗ್ಗೆ ಸತ್ಯಾಂಶ ತಿಳಿಯಲಿದೆ ಎಂದರು.ಮಹಾತ್ಮಗಾಂಧಿ ವೃತ್ತದಲ್ಲಿ ಮಹಾತ್ಮಗಾಂಧಿ ಪ್ರತಿಮೆಗೆ ಸಂಸದೆ ಪ್ರಿಯಾಂಕ ಜಾರಕಿಹೊಳಿ ಅವರು ಮಾಲಾರ್ಪಣೆ ಮಾಡಿದರು.ಸಂಸದರಾದ ಶ್ರೇಯಸ್ ಎಂ.ಪಟೇಲ್ ಹಾಗೂ ಪ್ರಿಯಾಂಕ ಜಾರಕಿಹೊಳಿ, ಎಂಎಲ್ಎ ಚಂದ್ರಪ್ಪ, ಮುಖಂಡರಾದ ಲಖನ್ ಜಾರಕಿಹೋಳಿ, ಎಚ್.ವಿ.ಪುಟ್ಟರಾಜು, ಲಕ್ಷ್ಮಣ, ಶೃತಿ ಗುಂಡಣ್ಣ, ಡೊನಾಲ್ಡ್, ಬಾಗಿವಾಳು ಮಂಜೇಗೌಡ, ಪ್ರಜ್ವಲ್, ಇತರರು ಇದ್ದರು.