ನವಲಗುಂದ:

ಪ್ರಜಾಪ್ರಭುತ್ವದ ಅಡಿಪಾಯವೇ ನಿಖರ ಮತ್ತು ಸಮಗ್ರ ಮತದಾರರ ಪಟ್ಟಿಯಾಗಿದೆ. ಹೀಗಾಗಿ, ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರುವುದನ್ನು ಖಚಿತಪಡಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಶಾಸಕ ಎನ್.ಎಚ್. ಕೋನರಡ್ಡಿ ತಿಳಿಸಿದರು.

​ತಾಲೂಕಿನ ಹಣಸಿ, ಶಿರಕೋಳ, ಮೊರಬ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ಅಂಗವಾಗಿ ಬೂತ್ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಎಸ್‌ಐಆರ್ ನಮೂನೆ ಭರ್ತಿ ಮಾಡಿ ಸಲ್ಲಿಸಿದರು. ಬಳಿಕ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

​ಈ ವಿಶೇಷ ಪರಿಷ್ಕರಣೆ ಅಭಿಯಾನದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಬೇಕು. ಅರ್ಹ ಮತದಾರರಿಗೆ ಅಗತ್ಯ ನೆರವು ನೀಡಿ, ಯಾವುದೇ ಒಬ್ಬ ಅರ್ಹ ವ್ಯಕ್ತಿಯ ಹೆಸರು ಕೂಡ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಜಾಗೃತಿ ಮೂಡಿಸಬೇಕು. ಆ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿ ಪ್ರತಿಯೊಬ್ಬ ಅರ್ಹ ಮತದಾರನ ಹಕ್ಕನ್ನು ಸಂರಕ್ಷಿಸೋಣ ಎಂದರು.

ಬ್ಲಾಕ್ ಅಧ್ಯಕ್ಷ ವರ್ಧಮಾನ ಹಿರೇಗೌಡ್ರ, ​ಸದುಗೌಡ ಪಾಟೀಲ, ಎಂ.ಎಸ್. ರೋಣದ, ಶಾಂತವ್ವ ಗುಜ್ಜಳ, ಸೋಮಲಿಂಗಪ್ಪ ಬಳಿಗೇರ, ದಾವಲಸಾಬ ಖುದ್ಧನವರ, ಸಂತೋಷ ಗುಜ್ಜಳ, ಈರಪ್ಪ ಮಾಳವಾಡ, ಮೌಲಾಸಾಬ ಮುತ್ತೋಜಿ, ಎಂ.ಎಂ. ಕಳ್ಳಿಮನಿ, ಗಡಿಗೆಪ್ಪ ಪಾಟೀಲ, ರಾಮಣ್ಣ ನಾಯ್ಕರ, ಶಿವಲೀಲಾ ಬೋರಶೆಟ್ಟರ ಸೇರಿ ಹಲವರಿದ್ದರು.