ತೆಂಕನಿಡಿಯೂರು ಕಾಲೇಜು : ಕ್ಯಾಂಪಸ್‌ನಿಂದ ಕಂಪನಿಗೆ- ಉಪನ್ಯಾಸ ಕಾರ್ಯಕ್ರಮ

| Published : Mar 29 2024, 12:55 AM IST

ತೆಂಕನಿಡಿಯೂರು ಕಾಲೇಜು : ಕ್ಯಾಂಪಸ್‌ನಿಂದ ಕಂಪನಿಗೆ- ಉಪನ್ಯಾಸ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ತೆಂಕನಿಡಿಯೂರು ಕಾಲೇಜಿನಲ್ಲಿ ‘ಎ ಜರ್ನಿ ಫ್ರಮ್ ಕಂಪನಿ ಟು ಕಾರ್ಪೋರೇಟ್’ ಎಂಬ ಕಾರ್ಯಾಗಾರ ನಡೆಯಿತು. ಪ್ರೊ. ಚಂದನ್ ರಾವ್ ಸಂದರ್ಶನ ಎದುರಿಸುವ ಬಗೆ, ರೆಸ್ಯೂಮ್ ಬರೆಯುವ ವಿಧಾನ, ಗುಂಪು ಸಂದರ್ಶನದ ನಿಯಮಗಳು ಮುಂತಾದವುಗಳ ಬಗ್ಗೆ ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಇಲ್ಲಿನ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇದರ ಐಕ್ಯೂಎಸಿ ಮತ್ತು ಉದ್ಯೋಗ ಮಾಹಿತಿ ಘಟಕ ಸಹಯೋಗದಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ‘ಎ ಜರ್ನಿ ಫ್ರಮ್ ಕಂಪನಿ ಟು ಕಾರ್ಪೋರೇಟ್’ ಎಂಬ ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಸಾಫ್ಟ್‌ಸ್ಕಿಲ್ ಟ್ರೈನರ್ ಹಾಗೂ ಫ್ರೀಲ್ಯಾನ್ಸ್ ಕನ್ಸಲ್ಟೆಂಟ್ ಪ್ರೊ. ಚಂದನ್ ರಾವ್ ಅವರು ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಮೂಡಿಸುವುದರೊಂದಿಗೆ ಕಾರ್ಪೋರೇಟ್ ವಲಯದಲ್ಲಿ ಉದ್ಯೋಗ ಪಡೆಯಲು ಬೇಕಾದ ಕೌಶಲ್ಯ ಮತ್ತು ಜ್ಞಾನ ಹೇಗೆ ಪಡೆಯಬೇಕು ಎಂಬ ಬಗ್ಗೆ ಮಾರ್ಗದರ್ಶನ ನೀಡಿದರು.ಸಂದರ್ಶನ ಎದುರಿಸುವ ಬಗೆ, ರೆಸ್ಯೂಮ್ ಬರೆಯುವ ವಿಧಾನ, ಗುಂಪು ಸಂದರ್ಶನದ ನಿಯಮಗಳು ಮುಂತಾದವುಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಸಮೂಹ ಚರ್ಚೆ ಮತ್ತು ಅಣಕು ಸಂದರ್ಶನವನ್ನು ನಡೆಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉದ್ಯೋಗ ಮಾಹಿತಿ ಘಟಕದ ಸಂಚಾಲಕ ದಿನೇಶ್ ಎಂ. ಕಾರ್ಯಾಗಾರ ಸಂಯೋಜಿಸಿ ಪ್ರಸ್ತಾವನೆಗೈದರು. ಐಕ್ಯೂಎಸಿ ಸಂಚಾಲಕ ಡಾ. ಮೇವಿ ಮಿರಾಂದ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಬಿಂದು ಟಿ., ವ್ಯವಹಾರ ಅಧ್ಯಯನಶಾಸ್ತ್ರ ಮುಖ್ಯಸ್ಥರಾದ ಡಾ. ರಘು ನಾಯ್ಕ, ಸಹಾಯಕ ಪ್ರಾಧ್ಯಾಪಕರಾದ ಡಾ. ಗೀತಾ ಎನ್. ಉಪಸ್ಥಿತರಿದ್ದರು. ಅಂತಿಮ ಬಿ.ಕಾಂ. ವಿದ್ಯಾರ್ಥಿನಿ ಶ್ರದ್ಧಾ ಸ್ವಾಗತಿಸಿ, ಶ್ರೇಯಾ ಪರಿಚಯಿಸಿ, ಅನನ್ಯ ವಂದಿಸಿದರು. ಬಿ.ಬಿ.ಎ. ವಿದ್ಯಾರ್ಥಿ ನಿತೀಶ್ ಜಿ. ಅಂಚನ್ ಕಾರ್ಯಕ್ರಮ ನಿರೂಪಿಸಿದರು.