ಸಾರಾಂಶ
ಅಂಕುರ್ ಪಬ್ಲಿಕ್ ಶಾಲೆಯ ವಾರ್ಷಿಕ ಕ್ರೀಡೋತ್ಸವ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದು ಗಣ್ಯರು ತಿಳಿಸಿದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಹಾಕಿ, ಕ್ರಿಕೆಟ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಯುವ ಜನರಿಗೆ ವಿಪುಲ ಅವಕಾಶಗಳಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದು ಬ್ಯಾಡ್ಮಿಂಟನ್ ಆಟಗಾರ, ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮಾಳೆಯಂಡ ಅಶೋಕ್ ಪೂವಯ್ಯ ಹೇಳಿದರು.ಅವರು ಅಂಕುರ್ ಪಬ್ಲಿಕ್ ಶಾಲೆಯ ವಾರ್ಷಿಕ ಕ್ರೀಡೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿದ ಬಳಿಕ ಪಥಸಂಚಲನ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚು ಹೆಚ್ಚಾಗಿ ತೊಡಗಿಸಿಕೊಳ್ಳಬೇಕು. ಕ್ರೀಡೆಗೆ ಉತ್ತಮ ಅವಕಾಶವಿದೆ. ಈಚೆಗೆ ಭಾರತದ ಮಹಿಳಾ ಕ್ರಿಕೆಟ್ ತಂಡ ಚಾಂಪಿಯನ್ ಆಗಿದೆ. ಇದು ಬಾಲಕಿಯರಿಗೆ ಸ್ಫೂರ್ತಿಯಾಗಲಿದೆ ಎಂದರು.ಅಂಕುರ್ ಪಬ್ಲಿಕ್ ಶಾಲೆಯ ವ್ಯವಸ್ಥಾಪಕಿ ಕೇಟೋಳಿರ ರತ್ನ ಚರ್ಮಣ ಮಾತನಾಡಿ, ಶಾಲೆಯಲ್ಲಿ ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.ಶಾಲೆಯಲ್ಲಿ ಕೇವಲ ಪಠ್ಯ ವಿಚಾರಕ್ಕೆ ಮಾತ್ರ ಆದ್ಯತೆ ನೀಡುತ್ತಿಲ್ಲ, ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಸಂಗೀತ, ನೃತ್ಯ, ಕ್ರೀಡೆ, ಅಬಾಕಸ್, ಕರಾಟೆ ಸೇರಿದಂತೆ ವಿವಿಧ ಕಲಾ ಪ್ರತಿಭೆಗಳಿಗೆ ಉತ್ತೇಜನ ನೀಡಲಾಗುತ್ತಿದೆ ಎಂದು ತಿಳಿಸಿದರು.ಮುಖ್ಯ ಅತಿಥಿ ಮಾಳೆಯಂಡ ಅಶೋಕ್ ಪೂವಯ್ಯ ಅವರ ಜನ್ಮದಿನವಾದ ಕಾರಣ ವಿದ್ಯಾರ್ಥಿಗಳಿಗೆ ಸಿಹಿ ಹಂಚಿದರು.ವಾರ್ಷಿಕ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ಜರುಗಿದವು. ಪೋಷಕರಿಗೆ, ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕ್ರೀಡೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಅಂಕುರ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಕೇಟೋಳಿರ ರಾಜ ಚರ್ಮಣ್ಣ ಅಧ್ಯಕ್ಷತೆ ವಹಿಸಿದ್ದರು. ಬೋಪಣ್ಣ ಸ್ವಾಗತಿಸಿದರು. ಶಿಕ್ಷಕಿಯರಾದ ಆಶಾ ಬೋಪಣ್ಣ, ಕನ್ನಿಕ ಹಾಗೂ ಕಾರ್ಯಕ್ರಮ ನಿರೂಪಿಸಿದರು. ಅನನ್ಯ ಅಯ್ಯಪ್ಪ ಅತಿಥಿಗಳನ್ನು ಪರಿಚಯಿಸಿದರು.ಲಾಲು ನಂಜಪ್ಪ ಹಾಗೂ ದೀಪಿಕಾ, ವಿಪಿನ್ ಸುಬ್ಬಯ್ಯ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದರು. ವಿದ್ಯಾರ್ಥಿನಿ ಅನನ್ಯ ಅಯ್ಯಪ್ಪ ವಂದಿಸಿದರು.
;Resize=(128,128))
;Resize=(128,128))