ಕನ್ನಡಪ್ರಭ ವಾರ್ತೆ,ದೊಡ್ಡಬಳ್ಳಾಪುರ
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಗುರುವಾರ ಮಾಸಿಕ ಹುಂಡಿ ಎಣಿಕೆ ಕಾರ್ಯ ನಡೆಯಿತು. ಈ ಬಾರಿ ಹುಂಡಿಯಲ್ಲಿ ಒಟ್ಟು ₹39.49 ಲಕ್ಷ ಸಂಗ್ರಹವಾಗಿದ್ದು, 890 ಗ್ರಾಂ ಬೆಳ್ಳಿ ಹಾಗೂ 4 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಭಕ್ತಾದಿಗಳು ಕಾಣಿಕೆಯಾಗಿ ಹುಂಡಿಗೆ ಹಾಕಿದ್ದಾರೆ. ಎಂದಿನಂತೆ ಹುಂಡಿ ಎಣಿಕೆ ಕಾರ್ಯದಲ್ಲಿ ಸಾರ್ವಜನಿಕರು ಮತ್ತು ಭಕ್ತಾದಿಗಳಿಗೂ ಅವಕಾಶ ನೀಡಲಾಗಿತ್ತು. ದೇವಾಲಯದ ಕಾರ್ಯದರ್ಶಿ ಪಿ. ದಿನೇಶ್, ದೇವಾಲಯದ ಉಪ ಕಾರ್ಯದರ್ಶಿ ಜಿ.ಜೆ .ಹೇಮಾವತಿ, ಪ್ರಧಾನ ಅರ್ಚಕ ಗುರುರಾಜ್ ಶರ್ಮ, ಸಿಬ್ಬಂದಿ ನಂಜಪ್ಪ, ಪ್ರಮೋದ್, ಪ್ರಾಧಿಕಾರ ಸದಸ್ಯರಾದ ಜೆ.ಎನ್ .ರಂಗಪ್ಪ, ಎಸ್ .ರವಿ, ಲಕ್ಷ್ಮ ನಾಯಕ್, ,ಮಹೇಶ್ ಕುಮಾರ್, ,ಹೇಮಲತಾ ರಮೇಶ್, ಇಂಡಿಯನ್ ಓವರ್ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಇದ್ದರು.ಘಾಟಿ ಸುಬ್ರಹ್ಮಣ್ಯ ಹುಂಡಿಯಲ್ಲಿ ₹39.49 ಲಕ್ಷ ಸಂಗ್ರಹ
ಎಂದಿನಂತೆ ಹುಂಡಿ ಎಣಿಕೆ ಕಾರ್ಯದಲ್ಲಿ ಸಾರ್ವಜನಿಕರು ಮತ್ತು ಭಕ್ತಾದಿಗಳಿಗೂ ಅವಕಾಶ ನೀಡಲಾಗಿತ್ತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.