ಕನ್ನಡಪ್ರಭ ವಾರ್ತೆ ಮೈಸೂರುಸರ್‌.ಎಂ. ವಿಶ್ವೇಶ್ವರಯ್ಯ ನಲ್ಲಿ ಮತ್ತು ಒಳಚರಂಡಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಚಾಮುಂಡಿಬೆಟ್ಟದ ಮೆಟ್ಟಿಲುಗಳ ಸ್ವಚ್ಛತಾ ಕಾರ್ಯ ನಡೆಸಿದರು.ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತಿ ಮತ್ತು ಆಷಾಢ ಮಾಸದ ಪ್ರಯುಕ್ತ ಈ ಸ್ವಚ್ಛತಾ ಕಾರ್ಯ ನಡೆಸಿದರು. ವಿಧಾನ ಪರಿಷತ್‌ ಸದಸ್ಯ ರಘು ಆರ್‌. ಕೌಟಿಲ್ಯ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ಬೆಟ್ಟದ ಎಲ್ಲಾ ಮೆಟ್ಟಿಲುಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿದರು. ಆಷಾಢ ಮಾಸದಲ್ಲಿ ಸಾವಿರಾರು ಮಂದಿ ಭಕ್ತರು ಮೆಟ್ಟಿಲುಗಳಿಗೆ ಪೂಜೆ ಸಲ್ಲಿಸುವುದು ಸಾಮಾನ್ಯ. ಈ ಹಿನ್ನೆಲೆಯಲ್ಲಿ ಬೆಟ್ಟದ 1101 ಮೆಟ್ಟಿಲುಗಳನ್ನೂ ಸ್ವಚ್ಛಗೊಳಿಸಿದರು.