ಪರಿಸ್ಥಿತಿ ತಿಳಿಗೊಳಿಸಲು ಹಾಗೂ ಕಾನುನು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸರ ಮೇಲೆ ಮುಗಿಬಿದ್ದ ಮೂವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು.

ಕನ್ನಡಪ್ರಭ ವಾರ್ತೆ ಹನೂರು

ಮೂವರ ಶೂಟೌಟ್ ಪ್ರಕರಣ ಸಂಬಂಧ ಹನೂರು ಪೊಲೀಸ್ ಠಾಣೆಯ ಮುಂದೆ ಕುಟುಂಬಸ್ಥರು, ಸ್ಥಳೀಯರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿ ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದರು.

ಹನೂರು ಪೊಲೀಸ್ ಠಾಣೆ ಮುಂದೆ ಮಲೆ ಮಹದೇಶ್ವರ ಬೆಟ್ಟಕ್ಕೆ ಹಾದುಹೋಗುವ ರಸ್ತೆಯ ಒಂದು ಬದಿಯಲ್ಲಿ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು. ಈ ವೇಳೆ ಕೆಲವರು ಮತ್ತೆ ರಸ್ತೆ ತಡೆ ನಡೆಸಲು ಮುಂದಾದಾಗ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ಉಂಟಾಯಿತು. ಪರಿಸ್ಥಿತಿ ತಿಳಿಗೊಳಿಸಲು ಹಾಗೂ ಕಾನುನು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸರ ಮೇಲೆ ಮುಗಿಬಿದ್ದ ಮೂವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು. ಹನೂರು ಪಟ್ಟಣ ಕೇಂದ್ರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

16ಸಿಎಚ್ಎನ್14

ಮೂವರ ಶೂಟೌಟ್‌ ಪ್ರಕರಣ ವಿರೋಧಿಸಿ ಹನೂರಿನಲ್ಲಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.