ಕ್ಯಾಪ್ಷನಃ26ಕೆಡಿವಿಜಿ42ಃದಾವಣಗೆರೆಯಲ್ಲಿ ಜಿಲ್ಲಾ ಪೊಲೀಸ್ ಆಧೀಕ್ಷಕರಾದ ಉಮಾ ಪ್ರಶಾಂತ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆಯಾದ ಮೊಬೈಲ್ಗಳ ಕುರಿತು ಮಾಹಿತಿ ನೀಡಿದರು. | Kannada Prabha
Image Credit: KP
ಹುಲಿ ಉಗುರು: ಅರಣ್ಯಾಧಿಕಾರಿ ವಿರುದ್ಧ ದೂರು
ಚಿಕ್ಕಮಗಳೂರು: ಹುಲಿ ಉಗುರು ಪ್ರಕರಣವೊಂದು ಅರಣ್ಯಾಧಿಕಾರಿಗಳ ಕೊರಳಿಗೆ ಸುತ್ತಿಕೊಂಡಿದೆ. ಜಿಲ್ಲೆಯ ಕಳಸದ ಉಪ ವಲಯ ಅರಣ್ಯಾಧಿಕಾರಿ ದರ್ಶನ್ ವಿರುದ್ಧ ಅರೆನೂರು ಗ್ರಾಮದ ಸುಪ್ರೀತ್ ಹಾಗೂ ಅಬ್ದುಲ್ ಎಂಬುವವರು ದೂರು ನೀಡಿದ್ದಾರೆ. ಆಲ್ದೂರಿನ ವಲಯ ಅರಣ್ಯಾಧಿಕಾರಿ ಹರೀಶ್ ಅವರಿಗೆ ಗುರುವಾರ ದೂರನ್ನು ಸಲ್ಲಿಸಲಾಗಿದೆ. ಡಿಆರ್ಎಫ್ಒ ದರ್ಶನ್ ಅವರು ಹುಲಿ ಉಗುರು ಧರಿಸಿದ್ದು, ಅವರ ವಿರುದ್ಧ ಪ್ರಕರಣ ದಾಖಲು ಮಾಡಬೇಕೆಂದು ದೂರನ್ನು ನೀಡಿದ್ದಾರೆ. ಈ ಸಂಬಂಧ ಗುರುವಾರವೇ ಮೂಡಿಗೆರೆಯ ಎಸಿಎಫ್ ಎದುರು ವಿಚಾರಣೆಗೆ ಹಾಜರಾಗುವಂತೆ ದರ್ಶನ್ ಅವರಿಗೆ ಸೂಚನೆ ನೀಡಲಾಗಿತ್ತು. ಆದರೆ, ಅವರು ಹಾಜರಾಗಿರಲಿಲ್ಲ, ಶುಕ್ರವಾರ ಹಾಜರಾಗಲೇಬೇಕೆಂದು ಕಟ್ಟುನಿಟ್ಟಾಗಿ ಸೂಚನೆ ನೀಡಲಾಗಿದೆ ಎಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.