ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಅವರ ಬೆಳಗಾವಿಯ ನಿವಾಸಕ್ಕೆ ಕರ್ನಾಟಕ ರಾಜ್ಯದ ಮರಾಠಾ ಸಮಾಜದ ಜಗದ್ಗುರು, ಗವೀಪುರಂ ಗೋಸಾಯಿ ಸಂಸ್ಥಾನ ಶ್ರೀ ಭವಾನಿ ದತ್ತ ಪೀಠದ ಶ್ರೀ ಮಂಜುನಾಥ ಭಾರತಿ ಸ್ವಾಮೀಜಿಯವರು ಗುರುವಾರ ಸೌಹಾರ್ದಯುತ ಭೇಟಿ ನೀಡಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸ್ವಾಮೀಜಿಯವರನ್ನು ಸ್ವಾಗತಿಸಿ, ಗೌರವಿಸಿದರು. ಮರಾಠಾ ಸಮಾಜದ ಸ್ಥಿತಿಗತಿ, ಮರಾಠಾ ಸಂಸ್ಕೃತಿ, ಮರಾಠ ಸಮುದಾಯಕ್ಕೆ ಶೈಕ್ಷಣಿಕ ಸೌಲಭ್ಯ ಸೇರಿದಂತೆ ಹಲವಾರು ವಿಷಯಗಳನ್ನು ಸ್ವಾಮೀಜಿಗಳು ಈ ಸಂದರ್ಭದಲ್ಲಿ ಚರ್ಚಿಸಿದರು. ಅಲ್ಲದೆ ಮರಾಠ ಧರ್ಮದ ಕುರಿತು ಜಾಗೃತಿ ಮೂಡಿಸಲು, ಸಾಮಾಜಿಕ ಜಾಗೃತಿಗಾಗಿ ತಾವು ಕೈಗೊಂಡಿರುವ ಕೆಲಸಗಳ ಕುರಿತು ಮತ್ತು ಮುಂದೆ ಆಗಬೇಕಿರುವ ಕೆಲಸಗಳ ಕುರಿತು ಸ್ವಾಮೀಜಿಗಳು ಮಾಹಿತಿ ನೀಡಿದರು. ಈ ವೇಳೆ ಬಾಳು ದೇಸೂರಕರ್, ಉಮೇಶ ಪಾಟೀಲ, ಯುವರಾಜ ಕದಂ, ಸಾತೇರಿ ಕೋಕಿತ್ಕರ್, ಪ್ರಹ್ಲಾದ ಚಿರಮುರಕರ್ ಮೊದಲಾದವರು ಇದ್ದರು.
ಸಚಿವೆ ಹೆಬ್ಬಾಳಕರ್ ನಿವಾಸಕ್ಕೆಮರಾಠಾ ಸಮಾಜದ ಸ್ವಾಮೀಜಿ ಭೇಟಿ
ಗವೀಪುರಂ ಗೋಸಾಯಿ ಸಂಸ್ಥಾನ ಶ್ರೀ ಭವಾನಿ ದತ್ತ ಪೀಠದ ಶ್ರೀ ಮಂಜುನಾಥ ಭಾರತಿ ಸ್ವಾಮೀಜಿಯವರು ಗುರುವಾರ ಸೌಹಾರ್ದಯುತ ಭೇಟಿ ನೀಡಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.