ಸರ್ಕಾರಿ ಶಾಲಾ ಶಿಕ್ಷಕರ ಕೊರತೆ ನಿವಾರಣೆಗೆ ಹೆಚ್ಚಿನ ಆದ್ಯತೆ: ಕೆ.ಎಂ.ಉದಯ್

| Published : Jun 17 2025, 02:08 AM IST

ಸರ್ಕಾರಿ ಶಾಲಾ ಶಿಕ್ಷಕರ ಕೊರತೆ ನಿವಾರಣೆಗೆ ಹೆಚ್ಚಿನ ಆದ್ಯತೆ: ಕೆ.ಎಂ.ಉದಯ್
Share this Article
  • FB
  • TW
  • Linkdin
  • Email

ಸಾರಾಂಶ

ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅಭಿವೃದ್ಧಿ ಸಾಧಿಸಬೇಕು. ಲೇಖನ ಸಾಮಗ್ರಿಗಳ ವಿತರಣೆ ಜೊತೆಗೆ ಶಾಲಾ ಶುಲ್ಕವನ್ನು ಕದಲೂರು ಉದಯ್ ಚಾರಿಟೇಬಲ್ ಟ್ರಸ್ಟ್‌ನಿಂದ ಭರಿಸಲಾಗುತ್ತಿದೆ.

ಕನ್ನಡ ಪ್ರಭ ವಾರ್ತೆ ಮದ್ದೂರು

ಪ್ರಸಕ್ತ ಸಾಲಿನಲ್ಲಿಯೂ ಸರ್ಕಾರಿ, ಅನುದಾನಿತ ಹಾಗೂ ಮೊರಾರ್ಜಿ ವಸತಿ ಶಾಲೆಗಳ 1 ರಿಂದ 10 ತರಗತಿಯ ಸುಮಾರು 16 ಸಾವಿರ ವಿದ್ಯಾರ್ಥಿಗಳಿಗೆ ಕದಲೂರು ಉದಯ್ ಚಾರಿಟೇಬಲ್ ಟ್ರಸ್ಟ್‌ನಿಂದ ಉಚಿತವಾಗಿ ಬ್ಯಾಗ್ ಮತ್ತು ಲೇಖನ ಸಾಮಗ್ರಿ ವಿತರಿಸಲಾಗುತ್ತಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.

ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬ್ಯಾಗ್ ಮತ್ತು ಲೇಖನ ಸಾಮಗ್ರಿಗಳ ವಿತರಿಸಿ ಮಾತನಾಡಿ, ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅಭಿವೃದ್ಧಿ ಸಾಧಿಸಬೇಕು. ಲೇಖನ ಸಾಮಗ್ರಿಗಳ ವಿತರಣೆ ಜೊತೆಗೆ ಶಾಲಾ ಶುಲ್ಕವನ್ನು ಟ್ರಸ್ಟ್‌ನಿಂದ ಭರಿಸಲಾಗುತ್ತಿದೆ ಎಂದರು.

ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ತಾಲೂಕಿನಲ್ಲಿ ಶಿಥಿಲಗೊಂಡ ಸರ್ಕಾರಿ ಶಾಲೆಗಳ ದುರಸ್ತಿ ಮತ್ತು ಮೂಲ ಸೌಲಭ್ಯಗಳನ್ನು ಟ್ರಸ್ಟ್‌ನಿಂದ ಕಲ್ಪಿಸಲಾಗುತ್ತಿದೆ. ಅಲ್ಲದೇ, ನಾನು ಶಾಸಕನಾದ ಬಳಿಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರದಿಂದ ವಿಶೇಷ ಅನುದಾನ ತಂದು ನೂತನ ಕೊಠಡಿಗಳ ನಿರ್ಮಾಣ, ಮೂಲ ಸೌಲಭ್ಯ ಕಲ್ಪಿಸಲು ಹಾಗೂ ಶಿಕ್ಷಕರ ಕೊರತೆ ನಿವಾರಣೆಗೆ ಹೆಚ್ಚಿನ ಆದ್ಯತೆ ನೀಡಿದ್ದೇನೆ ಎಂದರು.

ಇದೇ ವೇಳೆ ಚಾರಿಟಬಲ್ ಟ್ರಸ್ಟ್ ನಿರ್ದೇಶಕಿ ವಿನುತಾ ಉದಯ್ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಧನಂಜಯ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರವೀಶ್, ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಪಿ. ಸಂದರ್ಶ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಪಿ.ಸ್ವಾಮಿ, ಮುಖ್ಯ ಶಿಕ್ಷಕ ಬಿ.ವಿ.ಹಳ್ಳಿ ನಾರಾಯಣ್, ಮುಖಂಡರಾದ ಪುಟ್ಟಸ್ವಾಮಿ ಮತ್ತಿತರರು ಇದ್ದರು.