ಸಾರಾಂಶ
ಗ್ರಾಮಾಂತರ ಪ್ರದೇಶದಲ್ಲಿ ಶೇ.೧೦೦ ರಷ್ಟು ಜನನ-ಮರಣ ನೋಂದಣಿ ಉದ್ದೇಶದಿಂದ ಗ್ರಾಪಂ ಕಾರ್ಯದರ್ಶಿಗಳನ್ನು ಜನನ ಮರಣ ಉಪ ನೋಂದಣಿ ಅಧಿಕಾರಿಯಾಗಿ ಸರ್ಕಾರ ನೇಮಿಸಿದ್ದು ಗ್ರಾಮಾಂತರ ಪ್ರದೇಶದಲ್ಲಿ ಸಂಭವಿಸುವ ಎಲ್ಲಾ ಘಟನೆಗಳನ್ನು ಕಡ್ಡಾಯವಾಗಿ ನೋಂದಣಿ ಮಾಡುವಂತೆ ಹಾಗೂ ಅದರ ಪ್ರಾಮುಖ್ಯತೆ ಬಗ್ಗೆ ತಿಳಿಯಲು ಸಲಹೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಮಂಡ್ಯ ತಾಲೂಕಿನ ೪೬ ಗ್ರಾಮ ಪಂಚಾಯ್ತಿಗಳ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳಲ್ಲಿ ಜನನ, ಮರಣ ಸಂಭವಿಸಿದ ೨೧ ದಿನಗಳೊಳಗೆ ಜನನ ಮತ್ತು ಮರಣ ನೋಂದಣಿ ಮಾಡಿಸಿ ಪ್ರಮಾಣಪತ್ರ ಪಡೆಯಬಹುದು ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಜೆರಾಲ್ಡ್ ರಾಜೇಶ್ ತಿಳಿಸಿದರು.ತಾಲೂಕು ಪಂಚಾಯ್ತಿಯ ಸಾಮರ್ಥ್ಯ ಸೌಧದಲ್ಲಿ ಗ್ರಾಪಂ ಕಾರ್ಯದರ್ಶಿಗಳು ಹಾಗು ಡಿಇಒಗಳಿಗೆ ಜನನ-ಮರಣ ನೋಂದಣಿ ಬಗ್ಗೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಜನನ ಮತ್ತು ಮರಣ ನೋಂದಣಿ ತರಬೇತಿ ಕಾರ್ಯಾಗಾರದ ಸದುಪಯೋಗ ಯಶಸ್ವಿಯಾಗಿ ಪಡೆದುಕೊಳ್ಳಬೇಕು ಎಂದರು.
ತರಬೇತಿ ಕಾರ್ಯಾಗಾರ ಉದ್ಘಾಟಿಸಿದ ಮುಖ್ಯ ಯೋಜನಾಧಿಕಾರಿ ಧನುಷ್, ಗ್ರಾಮಾಂತರ ಪ್ರದೇಶದಲ್ಲಿ ಶೇ.೧೦೦ ರಷ್ಟು ಜನನ-ಮರಣ ನೋಂದಣಿ ಉದ್ದೇಶದಿಂದ ಗ್ರಾಪಂ ಕಾರ್ಯದರ್ಶಿಗಳನ್ನು ಜನನ ಮರಣ ಉಪ ನೋಂದಣಿ ಅಧಿಕಾರಿಯಾಗಿ ಸರ್ಕಾರ ನೇಮಿಸಿದ್ದು ಗ್ರಾಮಾಂತರ ಪ್ರದೇಶದಲ್ಲಿ ಸಂಭವಿಸುವ ಎಲ್ಲಾ ಘಟನೆಗಳನ್ನು ಕಡ್ಡಾಯವಾಗಿ ನೋಂದಣಿ ಮಾಡುವಂತೆ ಹಾಗೂ ಅದರ ಪ್ರಾಮುಖ್ಯತೆ ಬಗ್ಗೆ ತಿಳಿಸಿದರು.ಇದೇ ಸಂದರ್ಭದಲ್ಲಿ ಜಿಪಂ ಪಿಎಇಒ ಶಿವಮ್ಮ, ಡಿಎಸ್ಒ ಕೇಶವಮೂರ್ತಿ, ತಾಲೂಕು ಯೋಜನಾಧಿಕಾರಿ ಶ್ರೀನಿವಾಸ್, ಡಿಎಸ್ಒ ಕಚೇರಿ ಸಹಾಯಕ ನಿರ್ದೇಶಕರಾದ ಸೌಮ್ಯ, ರವಿ ಹಾಜರಿದ್ದರು.
ವೈದ್ಯಕೀಯ ಪದ್ಧತಿಯಲ್ಲಿ ಚಿಕಿತ್ಸಾ ವಿಧಾನಗಳ ಕುರಿತು ಉಪನ್ಯಾಸಕನ್ನಡಪ್ರಭ ವಾರ್ತೆ ನಾಗಮಂಗಲತಾಲೂಕಿನ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ತಪೋವನದಲ್ಲಿ ಗುರು ಶಿಷ್ಯ ಪರಂಪರೆ ತರಬೇತಿ ಶಿಬಿರದ ಎರಡನೇ ದಿನ ಹಾಸನದ ಶ್ರೀಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ವೈದ್ಯ ಡಾ.ಗುರುಬಸವರಾಜ ಯಲಗಚ್ಚಿ ಪಾಲ್ಗೊಂಡು ಭಾರತೀಯ ವೈದ್ಯಕೀಯ ಪದ್ಧತಿಯಲ್ಲಿ ಇಂದಿನ ಸ್ಥಿತಿಗತಿ ಮಹತ್ವ ಮತ್ತು ರೋಗ ಲಕ್ಷಣಗಳನ್ನು ಗುರುತಿಸಿ ಚಿಕಿತ್ಸಾ ವಿಧಾನಗಳ ಕುರಿತು ಉಪನ್ಯಾಸ ನೀಡಿದರು.
ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಶಿಬಿರದಲ್ಲಿ ಜಿಲ್ಲೆಯ ಖ್ಯಾತ ಪಾರಂಪರಿಕ ವೈದ್ಯ ಎನ್.ತಮ್ಮಣ್ಣ ಅವರು ಮೂಲವ್ಯಾದಿಗೆ ಸಂಬಂಧಿಸಿದ ಔಷಧಿ ಮೂಲಿಕೆಗಳನ್ನು ತಂದು ಶಿಬಿರಾರ್ಥಿಗಳಿಂದಲೇ ಚಿಕಿತ್ಸಾ ವಿಧಾನವನ್ನು ಪ್ರಾಯೋಗಿಕವಾಗಿ ಮಾಡಿಸಿದರು.ಈ ವೇಳೆ ಪರಿಷತ್ತಿನ ರಾಜ್ಯಾಧ್ಯಕ್ಷ ಜಿ.ಮಹಾದೇವಯ್ಯ, ನಿಕಟಪೂರ್ವ ಅಧ್ಯಕ್ಷ ನೇರ್ಲಿಗೆ ಗುರುಸಿದ್ದಪ್ಪ, ಪ್ರಧಾನ ಕಾರ್ಯದರ್ಶಿ ಅನುಗನಾಳು ಕೃಷ್ಣಮೂರ್ತಿ, ಖಜಾಂಚಿ ಶಿವಾನಂದ ಜಂಗಿನ ಮಠ, ರಾಜ್ಯ ಕಾರ್ಯ ಸಮಿತಿ ಸದಸ್ಯ ವೈದ್ಯ ಡಿ.ಜೆ. ಶಂಕರಪ್ಪ ಸೇರಿದಂತೆ ಪಾರಂಪರಿಕ ವೈದ್ಯರು ಹಾಗೂ ಶಿಬಿರಾರ್ಥಿಗಳು ಇದ್ದರು.