ಡಿಸಿಸಿ ಬ್ಯಾಂಕ್‌ ನಿರ್ದೇಶಕ ಹರೀಶ್‌ ಪೂವಯ್ಯಗೆ ಸನ್ಮಾನ

| Published : Mar 29 2024, 12:56 AM IST

ಸಾರಾಂಶ

ಕೊಡಗು ಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿ ಈಚೆಗೆ ಆಯ್ಕೆಯಾದ ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ಅವರನ್ನು ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ನಾಪೋಕ್ಲು: ಕೊಡಗು ಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿ ಈಚೆಗೆ ಆಯ್ಕೆಯಾದ ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ಅವರನ್ನು ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಸಂಘದ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಹರೀಶ್ ಪೂವಯ್ಯ, ಡಿಸಿಸಿ ಬ್ಯಾಂಕಿನ ನಿರ್ದೇಶಕರ ಸ್ಥಾನಕ್ಕೆ ಸತತವಾಗಿ ನಾಲ್ಕು ಬಾರಿ ಆಯ್ಕೆಯಾಗಿದ್ದೇನೆ. ಎರಡು ಬಾರಿ ಉಪಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದೇನೆ ಇದಕ್ಕೆ ಕಾರಣಕರ್ತರಾದ ಸಂಘದ ಎಲ್ಲ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು. ನಿರ್ದೇಶಕ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಮಾತನಾಡಿದರು.

ಈ ಸಂದರ್ಭ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಕುಂಡ್ಯೋಳಂಡ ಎಂ. ಕವಿತಾ, ನಿರ್ದೇಶಕರಾದ ಕೇಲೇಟಿರ ಮುತ್ತಮ್ಮ, ಚೀಯಕಪೂವಂಡ ಸತೀಶ್.ದೇವಯ್ಯ, ಚೋಕಿರ ಪ್ರಭು ಪೂವಪ್ಪ, ಎಚ್‌.ಎ. ಬೊಳ್ಳು, ಅರೆಯಡ ರತ್ನಾ ಪೆಮ್ಮಯ್ಯ, ಚೋಕಿರ ಸಜಿತ್ ಚಿಣ್ಣಪ್ಪ, ಕುಂಡ್ಯೋಳಂಡ ವಿಶು ಪೂವಯ್ಯ, ಟಿ.ಎ. ಮಿಟ್ಟು, ಅಪ್ಪಚ್ಚಿರ ರೀನಾ ನಾಣಯ್ಯ, ಎನ್.ಕೆ. ಪುಷ್ಪಾ, ವ್ಯವಸ್ಥಾಪಕ ಶಿವಚಾಳಿಯಂಡ ವಿಜು ಪೂಣಚ್ಚ ಹಾಗೂ ಸಿಬ್ಬಂದಿ ಇದ್ದರು.