ಚಾಮರಾಜನಗರ: ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸಪ್ರಸಾದ್ ನಿಧನದ ಗೌರವಾರ್ಥ ನಗರದ ರಾಮಸಮುದ್ರ ಚಿಕ್ಕ ಬೀದಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಘ ಹಾಗೂ ಗ್ರಾಮಸ್ಥರು ಶ್ರದ್ಧಾಂಜಲಿ ಸಲ್ಲಿಸಿದರು. ಅಂಬೇಡ್ಕರ್ ಭವನದ ಮುಂಭಾಗ ಶಾಮಿಯಾನ ಹಾಕಿ ಶ್ರೀನಿವಾಸಪ್ರಸಾದ್ ಅವರ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಿದರು. ಸಂಘದ ಅಧ್ಯಕ್ಷರು, ಯಜಮಾನರು ಹಾಗೂ ಮುಖಂಡರು ಅಗಲಿದ ನಾಯಕನಿಗೆ ಪುಷ್ಪ ನಮನ ಸಲ್ಲಿಸಿ, ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನ ಆಚರಿಸಿದರು. ನಗರಸಭಾ ಮಾಜಿ ಸದಸ್ಯ ಬಸವರಾಜು, ವಕೀಲ ನಾಗಣ್ಣ ,ಯಜಮಾನರಾದ ಬಂಗಾರಸ್ವಾಮಿ, ಮಾಜಿ ಯಜಮಾನ ಮಹದೇವಸ್ವಾಮಿ, ಅಂಬೇಡ್ಕರ್ ಸಂಘದ ಅಧ್ಯಕ್ಷ ನಾಗಣ್ಣ, ಉಪಾಧ್ಯಕ್ಷ ಜಯಕುಮಾರ್, ಲೋಕೇಶ್, ಆಶೋಕ್, ಗೋವಿಂದರಾಜು, ಜನಶಕ್ತಿ ಸುರೇಶ್ ಹಾಗೂ ಮುಖಂಡರು, ಯುವಕರು ಸಂಘದ ಪದಾಧಿಕಾರಿಗಳು ಇದ್ದರು.
ರಾಮಸಮುದ್ರ ಚಿಕ್ಕ ಬೀದಿಯಲ್ಲಿ ಪ್ರಸಾದ್ಗೆ ಶ್ರದ್ಧಾಂಜಲಿ
ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸಪ್ರಸಾದ್ ನಿಧನದ ಗೌರವಾರ್ಥ ನಗರದ ರಾಮಸಮುದ್ರ ಚಿಕ್ಕ ಬೀದಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಘ ಹಾಗೂ ಗ್ರಾಮಸ್ಥರು ಶ್ರದ್ಧಾಂಜಲಿ ಸಲ್ಲಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.