ಮಕ್ಕಳಿಗೆ ಸಂಸ್ಕಾರ ನೀಡಿದರೆ ವೃದ್ಧಾಪ್ಯ ಉತ್ತಮ: ಸಿವಿಲ್ ನ್ಯಾಯಾಧೀಶ ನೂರುನ್ನೀಸತಂದೆ, ತಾಯಿ ವಯಸ್ಸಾದಾಗ, ತುಂಬಾ ಅಶಕ್ತರಾದ ಮೇಲೆ ಅವರನ್ನು ವೃದ್ಧಾಶ್ರಮಕ್ಕೆ ಸೇರಿಸುವಂತಹ ನಕಾರಾತ್ಮಕ ಚಿಂತನೆಗಳನ್ನು ಮನಸ್ಸಿನಿಂದ ತೆಗೆದು ಹಾಕಿರಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ನೂರುನ್ನೀಸರವರು ಶಾಲಾ ಮಕ್ಕಳಿಗೆ ಕಿವಿಮಾತು ಹೇಳಿದರು. ತುಮಕೂರಿನಲ್ಲಿ ಮಕ್ಕಳ ದಿನಾಚರಣೆ, ಅಂತಾರಾಷ್ಟ್ರೀಯ ಮಧುಮೇಹ ದಿನಾಚರಣೆ ಹಾಗೂ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಶಾಲಾ ಮಕ್ಕಳಿಗೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.