ಮಕ್ಕಳ ಪಾಲನೆಗೆ ಹೆಚ್ಚು ಸಮಯ ನೀಡಿಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಒತ್ತಡದ ಬದುಕಿನಲ್ಲಿ ಬದುಕುತ್ತಿದ್ದು ಕೇವಲ ಹಣ ಸಂಪಾದನೆಗಷ್ಟೇ ಮಹತ್ವ ನೀಡುತ್ತಿದ್ದು ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸುತ್ತಿಲ್ಲ, ಶಿಕ್ಷಣದೊಂದಿಗೆ ಮಕ್ಕಳ ಪ್ರತಿಭೆಗೂ ಹೆಚ್ಚು ಒತ್ತು ನೀಡುವ ಮೂಲಕ ಮಕ್ಕಳನ್ನು ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ತರುವು ಪ್ರಯತ್ನ ಮಾಡಬೇಕು ಎಂದು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಶ್ರೀ ಹನುಮಂತನಾಥಸ್ವಾಮೀಜಿ ತಿಳಿಸಿದರು.