ಗ್ರಾಪಂಗಳಲ್ಲಿ ಸದಸ್ಯೆಯರ ಪತಿಗಳ ಅನಧಿಕೃತ ಪ್ರವೇಶಜಿಲ್ಲೆಯ ಹಲವು ಗ್ರಾಮ ಪಂಚಾಯ್ತಿಗಳಲ್ಲಿ ಮಹಿಳಾ ಸದಸ್ಯರ ಪತಿಯರು ಅನಧಿಕೃತವಾಗಿ ಗ್ರಾಮ ಪಂಚಾಯ್ತಿ ಆಡಳಿತದಲ್ಲಿ ತಲೆಹಾಕುತ್ತಿರುವುದು ಹಾಗೂ ಅಧಿಕಾರಿ, ಸಿಬ್ಬಂದಿಗಳ ಮೇಲೆ ದಬ್ಬಾಳಿಕೆ ಮಾಡುತ್ತಿರುವ ಪ್ರಕರಣಗಳು ಆಗಿಂದಾಗ್ಯೆ ನಡೆಯುತ್ತಲೇ ಇವೆ. ಇಂತಹ ಪ್ರಕರಣಗಳ ತಡೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ದಲಿತ ಸ್ವಾಭಿಮಾನಿ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಬಂಡೆಕುಮಾರ್ ಜಿಲ್ಲಾ ಪಂಚಾಯ್ತಿ ಸಿಇಒ ಜಿ.ಪ್ರಭು ಅವರಿಗೆ ಮನವಿ ಪತ್ರ ಸಲ್ಲಿಸಿದರು.