ಮುರುಳೀಧರ್ ಹಾಲಪ್ಪನವರಿಗೆ ಸೂಕ್ತ ಸ್ಥಾನಮಾನ ನೀಡಿ: ಹೈಕಮಾಂಡ್ ಗೆ ಪುಟ್ಟಲಿಂಗಪ್ಪಮುರಳೀಧರ್ ಹಾಲಪ್ಪನವರು ಒಬ್ಬ ಸಮಾಜ ಸೇವಕರಾಗಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದು, ರಾಜ್ಯ, ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಒಬ್ಬ ಪ್ರಜ್ಞಾವಂತ ಅನುಭವಿ ರಾಜಕಾರಣಿಗೆ ಕೆಲವರ ಕುತಂತ್ರದಿಂದ ಟಿಕೆಟ್ ಕೈತಪ್ಪಿ ಹೋಗಿರುವುದು ನಮ್ಮ ಸಮುದಾಯಕ್ಕೆ ಅವಮಾನವಾಗಿದೆ. ಆದರೂ ಸಹ ನಾವು ಯಾರನ್ನೂ ದ್ವೇಷಿಸದೇ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ಪಕ್ಷಕ್ಕೋಸ್ಕರ ದುಡಿಯುತ್ತೇವೆ.