ಸಮನ್ವಯ ಕೊರತೆಯಿಂದ ಪೂರ್ವ ಮುಂಗಾರು ನಿರ್ಲಕ್ಷ್ಯಕಲ್ಪತರು ನಾಡಿನ ಬಹುಭಾಗಗಳಲ್ಲಿ ಪೂರ್ವ ಮುಂಗಾರು ಮಳೆ ಉತ್ತಮವಾಗಿ ಆರಂಭವಾಗಿರುವುದರಿಂದ ಹರ್ಷಗೊಂಡಿರುವ ರೈತರು ಮುಂಗಾರು ಬೆಳೆಗಳನ್ನು ಬಿತ್ತನೆ ಮಾಡಲು ಭೂಮಿಯನ್ನು ಹಸನು ಮಾಡಿಕೊಳ್ಳಲು ಮುಂದಾಗಿದ್ದರೂ ಕೃಷಿ, ತೋಟಗಾರಿಕೆ, ಕೃಷಿ ವಿಜ್ಞಾನ ಕೇಂದ್ರಗಳು ಮಾತ್ರ ರೈತರಿಗೆ ಅಗತ್ಯ ಮಾಗಿ ಉಳುಮೆ, ಬಿತ್ತನೆ ಬೀಜಗಳ ಆಯ್ಕೆ, ಗೊಬ್ಬರ ಸೇರಿದಂತೆ ಯಾವುದೇ ತಾಂತ್ರಿಕ ಮಾಹಿತಿಗಳನ್ನು ನೀಡದೆ ನಿರ್ಲಕ್ಷ್ಯ ವಹಿಸುತ್ತಿವೆ.