ಪಾವಗಡ: ವಿವಿಧ ದೇವಸ್ಥಾನದಲ್ಲಿ ವಿಶೇಷ ಹೂವಿನ ಅಲಂಕಾರವೈಕುಂಠ ಏಕಾದಶಿ ಪ್ರಯುಕ್ತ ಶುಕ್ರವಾರ ನಗರದ ಹೊರವಲಯದಲ್ಲಿನ ಶಿರಾ ರಸ್ತೆಯ ದೇವಗಿರಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವೆಂಕಟೇಶ್ವರ ಸ್ವಾಮಿ ಹಾಗೂ ಶ್ರೀ ಶನೇಶ್ಚರಸ್ವಾಮಿ, ವೇಣುಗೋಪಾಲಸ್ವಾಮಿ ಶ್ರೀ ಚೌಡೇಶ್ವರಿ ದೇವಾಲಯ, ಕೃಷ್ಣಾಪುರದ ವೆಂಕಟರಮಣಸ್ವಾಮಿ, ಕಣಿವೆ ನರಸಿಂಹಸ್ವಾಮಿ ಹಾಗೂ ಕೋಟೆ ಆಂಜನೇಯಸ್ವಾಮಿ,ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.