ಗಾಂಧಿ, ಶಾಸ್ತ್ರಿ ಜೀವನ ಮೌಲ್ಯ ಅಳವಡಿಸಿಕೊಳ್ಳಿ

| Published : Oct 03 2025, 01:07 AM IST

ಗಾಂಧಿ, ಶಾಸ್ತ್ರಿ ಜೀವನ ಮೌಲ್ಯ ಅಳವಡಿಸಿಕೊಳ್ಳಿ
Share this Article
  • FB
  • TW
  • Linkdin
  • Email

ಸಾರಾಂಶ

ಮಹಾತ್ಮ ಗಾಂಧೀಜಿ ಅವರ ಜೀವನವೇ ಒಂದು ಸಂದೇಶ ಆ ಸಂದೇಶವು ನಮಗೆಲ್ಲರಿಗೂ ಮಾದರಿಯಾಗಿದೆ.

ಬಳ್ಳಾರಿ: ನಮ್ಮ ದೇಶವು ಸದಾ ಗೌರವಿಸುವ ಎರಡು ಮೇರು ವ್ಯಕ್ತಿತ್ವಗಳು ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ. ಇವರ ಸ್ಮರಣೆ ಇಂದಿನ ಕಾಲಘಟ್ಟದಲ್ಲಿ ಅಗತ್ಯವಿದೆ. ಅವರ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳೋಣ ಎಂದು ವಿಶ್ರೀಕೃ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ಮುನಿರಾಜು ಹೇಳಿದರು.

ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಗುರುವಾರ ಆಚರಿಸಿದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಿಶ್ವವಿದ್ಯಾಲಯದ ಕುಲಸಚಿವ ನಾಗರಾಜು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಾತ್ಮ ಗಾಂಧೀಜಿ ಅವರ ಜೀವನವೇ ಒಂದು ಸಂದೇಶ ಆ ಸಂದೇಶವು ನಮಗೆಲ್ಲರಿಗೂ ಮಾದರಿಯಾಗಿದೆ. ಶಾಸ್ತ್ರೀಯವರ ಸರಳತೆಯನ್ನು ಅವರ ಜೀವನದ ಕೆಲವು ಘಟನೆಗಳನ್ನು ವಿವರಿಸುವ ಮೂಲಕ ಸ್ಮರಿಸಿದರು. ಆ ಮೂಲಕ ಸರಳತೆಯ ಮಹತ್ವವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಮತ್ತು ಅದರ ಮೌಲ್ಯವನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ವಿಶ್ವವಿದ್ಯಾಲಯದ ಆಂಗ್ಲ ವಿಭಾಗದ ಪ್ರಾಧ್ಯಾಪಕ ಪ್ರೊ. ರಾಬರ್ಟ್ ಜೋಸ್ ಅವರು ಗಾಂಧೀಜಿ ಮತ್ತು ಶಾಸ್ತ್ರೀಜಿಯವರ ಜೀವನ ಮತ್ತು ಅವರು ಅನುಸರಿಸಿದ ಮಾರ್ಗಗಳನ್ನು ತಿಳಿದು ಅದನ್ನು ಪಾಲಿಸುವುದು ಇಂದಿನ ಯುವ ಪೀಳಿಗೆಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ.ಕುಮಾರ್ ಕಾರ್ಯಕ್ರಮವನ್ನು ನಿರ್ವಹಿಸಿದರು. ಕಾರ್ಯಕ್ರಮದ ನಂತರ ಸಸಿ ನೆಡುವ ಕಾರ್ಯಕ್ರಮವನ್ನು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಬೋಧಕರು ಮತ್ತು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ಸಸಿಗಳನ್ನು ನೆಟ್ಟು ನೀರೆರೆಯಲಾಯಿತು.