ಉಡುಪಿ ಕಾಂಗ್ರೆಸ್‌ನಿಂದ ನೂತನ ಎಸ್ಪಿ ಹರಿರಾಮ್ ಶಂಕರ್‌ಗೆ ಸ್ವಾಗತ

| Published : Jun 05 2025, 11:53 PM IST

ಸಾರಾಂಶ

ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಹರಿರಾಮ್ ಶಂಕರ್ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಪಕ್ಷದ ನಿಯೋಗವು ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದಿಸಿ ಉಡುಪಿ ಜಿಲ್ಲೆಗೆ ಸ್ವಾಗತ ಕೋರಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಹರಿರಾಮ್ ಶಂಕರ್ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಪಕ್ಷದ ನಿಯೋಗವು ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದಿಸಿ ಉಡುಪಿ ಜಿಲ್ಲೆಗೆ ಸ್ವಾಗತ ಕೋರಲಾಯಿತು.ಈ ಸಂದರ್ಭ ಸಮಾಜದಲ್ಲಿ ಶಾಂತಿ ಸ್ಥಾಪನೆಗಾಗಿ ಕಾಂಗ್ರೆಸ್ ಪಕ್ಷವು ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ತಿಳಿಸಲಾಯಿತು.ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯರಾದ ದಿನೇಶ್ ಪುತ್ರನ್, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಜ್ಯೋತಿ ಹೆಬ್ಬಾರ್, ಡಾ. ಶಿವರಾಮ್ ಕಾರಂತ ಟ್ರಸ್ಟ್‌ನ ಅಧ್ಯಕ್ಷ ಡಾ. ಗಣನಾಥ್ ಎಕ್ಕಾರು, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಮಹಾಬಲ ಕುಂದರ್ ಹಾಗೂ ಪ್ರಖ್ಯಾತ್ ಶೆಟ್ಟಿ, ಉಡುಪಿ ಬ್ಲಾಕ್ ಎಸ್.ಸಿ ಘಟಕ ಅಧ್ಯಕ್ಷ ಗಣೇಶ್ ನೆರ್ಗಿ, ಪಂಚಾಯಿತಿ ಸದಸ್ಯ ಸತೀಶ್ ನಾಯ್ಕ್, ಮಂಜುನಾಥ್ ಆಚಾರ್ಯ, ಪೃಥ್ವಿರಾಜ್ ಶೆಟ್ಟಿ, ಶರತ್ ಶೆಟ್ಟಿ, ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷ ಸೌರಭ್ ಬಲ್ಲಾಳ್, ಉಡುಪಿ ನಗರಸಭೆ ಮಾಜಿ ಅಧ್ಯಕ್ಷರಾದ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷರಾದ ಸಂಧ್ಯಾ ತಿಲಕ್‌ರಾಜ್, ಕಾಂಗ್ರೆಸ್ ನಾಯಕರಾದ ಸತೀಶ್ ಕೊಡವೂರು, ಮೊಹಮ್ಮದ್, ಯತೀಶ್ ಕರ್ಕೇರ, ನಾರಾಯಣ್ ಕುಂದರ್, ಸಾಯಿರಾಜ್, ಸಂಜಯ್ ಆಚಾರ್ಯ, ಧನಪಾಲ್, ಶ್ರೇಯಸ್ ಶೆಟ್ಟಿ, ಸಿರಾಜ್, ಅರ್ಚನಾ ದೇವಾಡಿಗ, ರಾಜೇಶ್ ನಾಯ್ಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.