ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ನಿಯೋಗ-ಪೊಲೀಸ್ ವರಿಷ್ಠಾಧಿಕಾರಿ ಭೇಟಿ

| Published : Jun 05 2025, 01:46 AM IST

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ನಿಯೋಗ-ಪೊಲೀಸ್ ವರಿಷ್ಠಾಧಿಕಾರಿ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ನಿಯೋಗದಿಂದ ಉಡುಪಿಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಭೇಟಿ ಮಾಡಿ ಅಭಿನಂದಿಸಲಾಯಿತು.

ಕನ್ನಡಪ್ರಭ ವಾರ್ತೆ, ಉಡುಪಿ

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ನಿಯೋಗದಿಂದ ಉಡುಪಿಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಭೇಟಿ ಮಾಡಿ ಅಭಿನಂದಿಸಲಾಯಿತು.ಈ ಸಂದರ್ಭ ನಿಯೋಗವು ಉಡುಪಿ ಜಿಲ್ಲೆಯ ಸೌಹಾರ್ದ ಪರಂಪರೆಯನ್ನು ಉಲ್ಲೇಖಿಸಿ, ನೂತನ ಪೊಲೀಸ್ ವರುಷ್ಠಾಧಿಕಾರಿ ಅವರ ಅವಧಿಯಲ್ಲಿ ಇಲ್ಲಿನ ಕಾನೂನು ಸುವ್ಯವಸ್ಥೆ ಮತ್ತಷ್ಟು ಉತ್ತಮಗೊಳ್ಳಲಿ ಎಂದು ಹಾರೈಸಿದರು. ಇದೇ ಸಂದರ್ಭ ಜಿಲ್ಲೆಯ ಅಕ್ರಮ ಚಟುವಟಿಕೆಗಳನ್ನು ನಿಗ್ರಹಿಸುವಲ್ಲಿ ನೂತನ ಎಸ್ಪಿ ವಿಶಿಷ್ಟ ಕಾಳಜಿ ವಹಿಸಬೇಕು‌. ಡ್ರಗ್ಸ್, ಗಾಂಜಾ ದಂಧೆಯ ವಿರುದ್ಧ ಸೂಕ್ತ ಕಾರ್ಯಾಚರಣೆ ನಡೆಸುವಂತೆ ವಿನಂತಿಸಲಾಯಿತು.ಈ ನಿಯೋಗದಲ್ಲಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಮುಹಮ್ಮದ್ ಮೌಲ, ಸಂಯುಕ್ತ ಸುನ್ನಿ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ನೇಜಾರು, ರಫೀಕ್ ಕುಂದಾಪುರ, ಉಡುಪಿ ಜಿಲ್ಲಾ ವಕ್ಫ್ ಬೋರ್ಡ್ ನ ಮಾಜಿ ಅಧ್ಯಕ್ಷ ನಕ್ವಾ ಯಹ್ಯಾ, ರಿಯಾಝ್ ಕೋಡಿ, ಇಸ್ಮಾಯಿಲ್ ಕಟಪಾಡಿ, ಅಮೀರ್ ಹಂಝಾ,ಜಮಾಅತೆ ಇಸ್ಲಾಮಿ ಹಿಂದ್''''''''ನ ಇಬ್ರಾಹಿಮ್ ಕಿದೆವರ್ ಹೂಡೆ, ಸಯ್ಯದ್ ಫರೀದ್ ಶೇಖ್, ಎಪಿಸಿಆರ್ ರಾಜ್ಯ ಕಾರ್ಯದರ್ಶಿ ಹುಸೇನ್ ಕೋಡಿಬೆಂಗ್ರೆ, ಸಾಲಿಡಾರಿಟಿ ರಾಜ್ಯ ಕಾರ್ಯದರ್ಶಿ ಅಫ್ವಾನ್ ಹೂಡೆ, ಯಾಸೀನ್ ಕೋಡಿಬೆಂಗ್ರೆ ಉಪಸ್ಥಿತರಿದ್ದರು.