ಸಾರಾಂಶ
ಉಡುಪಿ ಪೂರ್ಣಪ್ರಜ್ಞ (ಸ್ವಾಯತ್ತ) ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಆಶ್ರಯದಲ್ಲಿ ಹಿಂದಿ ವಿಭಾಗದ ವತಿಯಿಂದ ‘ಹಿಂದಿ ದಿವಸ’ ವನ್ನು ಆಚರಿಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿನಗರದ ಪೂರ್ಣಪ್ರಜ್ಞ (ಸ್ವಾಯತ್ತ) ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಆಶ್ರಯದಲ್ಲಿ ಹಿಂದಿ ವಿಭಾಗದ ವತಿಯಿಂದ ‘ಹಿಂದಿ ದಿವಸ’ ವನ್ನು ಆಚರಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕೃತಿಕಾ ಪಿ. ಶೆಣೈ, ಭಾಷೆಯ ಉತ್ಪತ್ತಿ ಮತ್ತು ವಿಕಾಸದ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿ, ಭಾಷೆ ಮನುಷ್ಯನ ಜೀವನದಲ್ಲಿ ಅತೀವ ಪ್ರಮುಖ ಪಾತ್ರವಹಿಸುವುದನ್ನು ಸ್ಪಷ್ಟಪಡಿಸಿದರು. ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಭಾಷಾಜ್ಞಾನ ಅತ್ಯಂತ ಅವಶ್ಯಕವಾಗಿದ್ದು, ರಾಷ್ಟ್ರದ ಏಕತೆಯನ್ನು ಬಲಪಡಿಸುವಲ್ಲಿ ಭಾಷೆಯ ಮಹತ್ವ ಅನನ್ಯ ಎಂದು ವಿವರಿಸಿದರು.
ವಿಶೇಷವಾಗಿ ನಮ್ಮ ದೇಶದ ರಾಜ್ಯಭಾಷೆಯಾಗಿರುವ ಹಿಂದಿ ಭಾಷೆಯ ಕುರಿತು ವಿದ್ಯಾರ್ಥಿಗಳಲ್ಲಿ ಗೌರವ, ಅರಿವು ಮತ್ತು ಹೆಮ್ಮೆಯನ್ನು ಬೆಳೆಸುವಂತೆ ಕರೆ ನೀಡಿದರು.ಹಿಂದಿ ದಿವಸದ ಅಂಗವಾಗಿ ವಿವಿಧ ಸ್ಪರ್ಧೆಗಳು ಆಯೋಜಿಸಲ್ಪಟ್ಟಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಕಾರ್ಯಕ್ರಮಕ್ಕೆ ಹಿಂದಿ ವಿಭಾಗದ ಮುಖ್ಯಸ್ಥ ಡಾ. ಆನಂದ ರಾಯಮಾನೆ ಅಧ್ಯಕ್ಷತೆ ವಹಿಸಿದ್ದರು. ವಿಭಾಗದ ಅಧ್ಯಾಪಕಿ ಭೈರವಿ ಪಾಂಡೆ ಹಾಗೂ ಇತರ ಅಧ್ಯಾಪಕರು ಉಪಸ್ಥಿತರಿದ್ದರು.