ಉಡುಪಿ: ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

| Published : Sep 29 2024, 01:47 AM IST

ಸಾರಾಂಶ

ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಗರದ ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸೋಲು - ಗೆಲುವುಗಳನ್ನು ಸಮಾನವಾಗಿ ಪರಿಗಣಿಸಿ ಮುನ್ನಡೆಯುವ ಸಾಮರ್ಥ್ಯವನ್ನು ಕ್ರೀಡೆಗಳು ಕಲಿಸುವುದರ ಜೊತೆಗೆ ಮತ್ತೊಬ್ಬರ ಗೆಲುವನ್ನು ಸಹ ಸಂಭ್ರಮಿಸುವ ಮನೋಭಾವವನ್ನು ನಾವು ಬೆಳಸಿಕೊಳ್ಳಬೇಕು ಎಂದರು.ಕಾರ್ಯಕ್ರಮದಲ್ಲಿ ನಗರಸಭೆ ಪೌರಯುಕ್ತ ರಾಯಪ್ಪ, ವಾಲಿಬಾಲ್‌ ತರಬೇತುದಾರ ರಾಜೇಶ್ ಪತ್ತರ್‌, ಉಡುಪಿ ತಾಲೂಕು ಕ್ರೀಡಾಧಿಕಾರಿ ವಸಂತ್‌ ಜೋಗಿ, ಕಾಪು ತಾಲೂಕು ಕ್ರೀಡಾಧಿಕಾರಿ ರಿತೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗಣದಲ್ಲಿ ಪುರುಷರ ಹಾಗೂ ಮಹಿಳೆಯರ ವಾಲಿಬಾಲ್ ಹಾಗೂ ಕಬಡ್ಡಿ ಪಂದ್ಯಾಟಗಳು ಜರುಗಿದವು.