ಪೇಜಾವರ ಶ್ರೀಗಳ ಅವಹೇಳನ, ಕಾನೂನು ಹೋರಾಟಕ್ಕೆ ಸಿದ್ಧತೆ: ವಿಹಿಂಪನ.23ರಂದು ಬೆಂಗಳೂರಿನ ವಿವಿ ಪುರಂನ ವಾಸವಿ ವಿದ್ಯಾನಿಕೇತನ ಸಭಾಂಗಣದಲ್ಲಿ ನಡೆದ ಸಂತ ಸಮಾವೇಶದಲ್ಲಿ ಪೇಜಾವರ ಶ್ರೀ ಸೇರಿದಂತೆ 50ಕ್ಕೂ ಹೆಚ್ಚು ಸಂತರು ಆಗಮಿಸಿದ್ದರು. ಈ ಸಭೆಯಲ್ಲಿ ಪೇಜಾವರ ಶ್ರೀಗಳು ವಕ್ಫ್ ವಿವಾದದ ಬಗ್ಗೆ ಮಾತನಾಡಿದ್ದಾರೆ. ಸಂವಿಧಾನದ ಬಗ್ಗೆ ಮಾತನಾಡಿಲ್ಲ. ಆದರೂ ಕೆಲವು ಪತ್ರಿಕೆಗಳು, ಸಾಮಾಜಿಕ ಜಾಲತಾಣಗಳು ಅವರ ಮಾತನ್ನು ತಿರುಚಿ ಪ್ರಕಟ ಮಾಡಿವೆ ಎಂದು ಪುರಾಣಿಕ್ ಆರೋಪಿಸಿದರು.