ಗುರು ಪೂರ್ಣಿಮಾ ಪ್ರಯುಕ್ತ ರಾಜಾಂಗಣದಲ್ಲಿ ವಿಶೇಷ ಭಜನಾ ಸೇವೆಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ, ಉಡುಪಿ ಇದರ ಆಶ್ರಯದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕೇಂದ್ರ ಸಮಿತಿ, ಧರ್ಮಸ್ಥಳ ಇದರ ಸಹಯೋಗದೊಂದಿಗೆ ‘ಗುರು ಪೂರ್ಣಿಮಾ’ ಪ್ರಯುಕ್ತ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಹಾಗೂ ಕಿರಿಯ ಯತಿವರ್ಯರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದಂಗಳವರಿಗೆ ‘ಗುರು ವಂದನೆ’ ಸಲ್ಲಿಸಲಾಯಿತು.