• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಬ್ರಿ: ಕೃತಕ ಆಭರಣ ಮತ್ತು ಕರಕುಶಲ ವಸ್ತುಗಳ ತರಬೇತಿ ಉದ್ಘಾಟನೆ
ಉಡುಪಿಯ ರೊಬೊಸಾಫ್ಟ್ ಟೆಕ್ನಾಲಜೀಸ್, ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್, ರೋಟರಿ ಕ್ಲಬ್ ಮಣಿಪಾಲ, ಹೆಬ್ರಿಯ ರೋಟರಿ ಸಮುದಾಯ ದಳ, ಹೆಬ್ರಿ ಗ್ರಾಮ ಪಂಚಾಯಿತಿ ಮತ್ತು ಧನಲಕ್ಷ್ಮೀ ಸಂಜೀವಿನಿ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ೧೦ ದಿನಗಳ ವಿವಿಧ ರೀತಿಯ ಕೃತಕ ಆಭರಣ ಮತ್ತು ಅಲಂಕಾರಿಕ ಕರಕುಶಲ ವಸ್ತುಗಳ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಹೆಬ್ರಿಯ ಸಮುದಾಯ ಭವನದಲ್ಲಿ ಜರುಗಿತು.
23ರಿಂದ ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ’
ರಂಗಹಬ್ಬವನ್ನು ಫೆ.23ರಂದು ಹಿರಿಯ ಸಾಹಿತಿ ಅರವಿಂದ ಮಾಲಗತ್ತಿ ಉದ್ಘಾಟಿಸಲಿದ್ದಾರೆ. ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರತಿದಿನ ರಂಗಸಾಧಕರಿಗೆ ಸನ್ಮಾನ, ಅದೃಷ್ಟ ಪ್ರೇಕ್ಷಕರಿಗೆ ಟ್ರಾವೆಲಿಂಗ್ ಬ್ಯಾಗ್‌ನ ಕೊಡುಗೆ ಇರಲಿದೆ.
ಶಿರ್ವ: ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಯವರ ೨೦ನೇ ಆರಾಧನೆ
ಶಿರ್ವದ ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರಿ ದೇವಳದಲ್ಲಿ ಶುಕ್ರವಾರ ಸಾರಸ್ವತ ಮಠ ಪರಂಪರೆಯ ಆದ್ಯಗುರು ಪೀಠ ಶ್ರೀಸಂಸ್ಥಾನ ಗೌಡ ಪಾದಾಚಾರ್ಯ ಶ್ರೀಕೈವಲ್ಯ ಮಠ ಗೋವಾ ಇಲ್ಲಿನ ೭೬ನೇ ಪೀಠಾಧಿಪತಿಗಳಾದ ಶ್ರೀಮದ್ ಸಚ್ಚಿದಾನಂದ ಸರಸ್ವತಿ ಸ್ವಾಮೀ ಮಹಾರಾಜ್‌ರವರ ೨೦ನೇ ಆರಾಧನಾ ಪುಣ್ಯತಿಥಿಯಂದು ವಿಶೇಷ ಪೂಜೆ, ಗುರು ಸಂಸ್ಮರಣೆ ನಡೆಯಿತು.
ವಿಕಾಸಕ್ಕಾಗಿ ಜಾನಪದ, ಜಾನಪದ ಸಂಗೀತ, ಗೌರವ ಸನ್ಮಾನ ಕಾರ್ಯಕ್ರಮ
ರಾಜ್ಯ ಕನ್ನಡ ಜಾನಪದ ಪರಿಷತ್‌ನ ಉಡುಪಿ ಜಿಲ್ಲಾ ಮತ್ತು ತಾಲೂಕು ಘಟಕ ಹಾಗೂ ನಗರದ ಉಪೇಂದ್ರ ಪೈ ಸ್ಮಾರಕ ಕಾಲೇಜುಗಳ ಆಶ್ರಯದಲ್ಲಿ ಶುಕ್ರವಾರ ವಿಕಾಸಕ್ಕಾಗಿ ಜಾನಪದ, ಜಾನಪದ ಸಂಗೀತ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು.
ರೆಡಿಮಿಕ್ಸ್ ಘಟಕಗಳಿಂದ ಸಾರ್ವಜನಿಕ ತೊಂದರೆ: ಕ್ರಮಕ್ಕೆ ಶಾಸಕ ಯಶ್ಪಾಲ್‌ ಸೂಚನೆ
ಘಟಕಗಳಲ್ಲಿ ಸಿಮೆಂಟ್ ಧೂಳು, ತ್ಯಾಜ್ಯ ನೀರು ಸಮರ್ಪಕ ವಿಲೇವಾರಿ ಮಾಡದೆ ಪರಿಸರ ಮಾಲಿನ್ಯ ಮಾಡುತ್ತಿರುವ ಹಾಗೂ ನಿಯಮ ಮೀರಿ ವಾಹನದಲ್ಲಿ ಹೆಚ್ಚಿನ ಪ್ರಮಾಣದ ಕಾಂಕ್ರೀಟ್ ಮಿಕ್ಸ್ ಸಾಗಣೆ ಮಾಡಿ ರಸ್ತೆಯಲ್ಲಿ ಚೆಲ್ಲುವ ಪರಿಣಾಮ ರಸ್ತೆ ಸುರಕ್ಷತೆಗೆ ಸಮಸ್ಯೆ ಉಂಟಾಗುತ್ತಿದ್ದು, ಹಲವಾರು ಅಪಘಾತಗಳು ನಡೆದಿದೆ. ಜೊತೆಗೆ ಓವರ್ ಲೋಡ್ ಕಾಂಕ್ರೀಟ್ ಮಿಕ್ಸ್ ವಾಹನಗಳ ಸಂಚಾರದಿಂದ ರಸ್ತೆಗಳು ಹದಗೆಟ್ಟಿರುವ ಬಗ್ಗೆ ದೂರುಗಳು ಬರುತ್ತಿದ್ದು, ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು, ತಪ್ಪಿದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಕಣ್ಮನ ಸೆಳೆದ ಕನ್ನಡ ಸಾಂಸ್ಕೃತಿಕ ದಿಬ್ಬಣ, ಕನ್ನಡಮಯವಾದ ವಿವಿ ಆವರಣ!
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆಯ ಮಂಗಳ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಸೈಗೋಳಿಯ ಕೇಂದ್ರ ಮೈದಾನದಿಂದ ವೈಭವದ ಸಾಂಸ್ಕೃತಿಕ ಮೆರವಣಿಗೆ ಶುಕ್ರವಾರ ನಡೆಯಿತು. ಸಾಂಸ್ಕೃತಿಕ ಮೆರವಣಿಗೆಗೆ ಪದ್ಮಶ್ರೀ ಹರೇಕಳ ಹಾಜಬ್ಬ ಚಾಲನೆ ನೀಡಿದರು.
ಉಡುಪಿ: ಯುಪಿಎಂಸಿಯಲ್ಲಿ ಮಾತೃ ಭಾಷಾ ದಿನಾಚರಣೆ
ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಶುಕ್ರವಾರ ವಿಶ್ವ ಮಾತೃ ಭಾಷಾ ದಿನಾಚರಣೆಯನ್ನು ವಿವಿಧ ಭಾಷೆಗಳಲ್ಲಿ ನಡೆಸಲಾಯಿತು.
ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ 14 ಕೋಟಿ ರು. ಅವ್ಯವಹಾರ:ತನಿಖೆಗೆ ಅನುಮತಿಸದ ಸರ್ಕಾರದ ವಿರುದ್ಧ ರೈತರಿಂದ ಪ್ರತಿಭಟನೆ
ಬ್ರಹ್ಮಾವರದ ದ.ಕ. ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2021-22ರ ಅವಧಿಯಲ್ಲಿ 14 ಕೋಟಿ ರು.ಗಳ ಅವ್ಯವಹಾರ ನಡೆಸಲಾಗಿರುವ ಪ್ರಕರಣದ ತನಿಖೆಯ ಹಿನ್ನೆಲೆಯಲ್ಲಿ ಫೆ.22ರಂದು ಬೆಳಗ್ಗೆ 9.30ರಿಂದ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗೇಟಿನ ಬಳಿಯಲ್ಲಿ ಅನಿರ್ದಿಷ್ಟವಧಿ ಧರಣಿ ಸತ್ಯಾಗ್ರಹ ನಡೆಸಲು ಉಡುಪಿ ಜಿಲ್ಲಾ ರೈತ ಸಂಘ ನಿರ್ಧರಿಸಿದೆ.
1ರಿಂದ 10 ಕನ್ನಡದಲ್ಲೇ ಕಡ್ಡಾಯ ಶಿಕ್ಷಣಕ್ಕೆ ಸುಗ್ರೀವಾಜ್ಞೆ ತರಲಿ: ಡಾ.ಪ್ರಭಾಕರ ಶಿಶಿಲ ಆಶಯ
ಒಂದನೇ ತರಗತಿಯಿಂದ 10ನೇ ತರಗತಿ ವರೆಗೆ ಕನ್ನಡ ಮಾಧ್ಯಮದಲ್ಲೇ ಕಡ್ಡಾಯ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿಗೊಳಿಸಬೇಕು ಎಂದು ಹಿರಿಯ ಸಾಹಿತಿ ಡಾ.ಬಿ.ಪ್ರಭಾಕರ ಶಿಶಿಲ ಆಶಯ ವ್ಯಕ್ತಪಡಿಸಿದ್ದಾರೆ. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಂಗಳೂರು ವಿಶ್ವವಿದ್ಯಾಲಯದ ಮಂಗಳ ಸಭಾಂಗಣದಲ್ಲಿ ಶುಕ್ರವಾರ ಎರಡು ದಿನಗಳ ದ.ಕ.ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
22ರಿಂದ ಬ್ರಹ್ಮಕುಮಾರೀಸ್‌ ಈಶ್ವರೀಯ ವಿವಿಯಿಂದ ಶಿವರಾತ್ರಿ: ದಾದ್ವಶ ಜ್ಯೋರ್ತಿಲಿಂಗಗಳ ದರ್ಶನ
ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಉಡುಪಿ ಶಾಖೆ ವತಿಯಿಂದ ಶಿವರಾತ್ರಿ ಉತ್ಸವ ಅಂಗವಾಗಿ ಫೆ.22ರಿಂದ 26ರ ವರೆಗೆ ವಿವಿಧ ಸಾಂಸ್ಕೃತಿಕ ಹಾಗೂ ಸ್ಪರ್ಧಾ ಕಾರ್ಯಕ್ರಮಗಳನ್ನು ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಆಯೋಜಿಸಲಾಗಿದೆ.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 464
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved