ಕೋಟೇಶ್ವರ: ನವೀಕೃತ ವಿದ್ಯುತ್ ಚಿತಾಗಾರ ಲೋಕಾರ್ಪಣೆಉಡುಪಿ ಜಿಲ್ಲಾ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕುಂದಾಪುರ ತಾ.ಪಂ. ಮತ್ತು ಕೋಟೇಶ್ವರ ಗ್ರಾ.ಪಂ.ಗಳ ನೇತೃತ್ವದಲ್ಲಿ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿರುವ ಸುಮಾರು 25 ವರ್ಷಗಳ ಹಿಂದಿನ ಹಿಂದೂ ರುದ್ರಭೂಮಿಯನ್ನು ಸುಮಾರು 1 ಕೋಟಿ ರು. ವೆಚ್ಚದಲ್ಲಿ ಆಧುನಿಕರಣಗೊಳಿಸಲಾಗಿದ್ದು, ಈ ವಿದ್ಯುತ್ ಚಿತಾಗಾರವನ್ನು ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು.