ಕಷ್ಟ ನಷ್ಟ ಅರಿತವ ಮಾತ್ರ ಉತ್ತಮ ಕಲಾವಿದನಾಗಬಲ್ಲ: ನವೀನ್ ಡಿ. ಪಡೀಲ್ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಭಾನುವಾರ ಹಿರಿಯ ತುಳು ನಾಟಕ, ಚಲನಚಿತ್ರ ನಟ ನವೀನ್ ಡಿ. ಪಡೀಲ್ ಅವರಿಗೆ 2025ನೇ ಸಾಲಿನ ವಿಶ್ವಪ್ರಭಾ ಪುರಸ್ಕಾರನವನ್ನು 1 ಲಕ್ಷ ರು. ನಗದು ಸಹಿತ ನೀಡಿ ಗೌರವಿಸಲಾಯಿತು. ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ವತಿಯಿಂದ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರ ಹಾಗೂ ಪ್ರಭಾವತಿ ಶೆಣೈ ಮತ್ತು ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಕತ್ವದಲ್ಲಿ ಸಮಾರಂಭ ಸಂಪನ್ನಗೊಂಡಿತು.