ಗೋರುಂಡ ಪತ್ತೆ ಕೇಸು ಕೋಮು ನಿಗ್ರಹ ದಳಕ್ಕೆ ವಹಿಸಲು ಆಗ್ರಹಹಿಂದುಗಳನ್ನು ಮಾತ್ರ ದಮನಿಸಲು ಕೋಮು ನಿಗ್ರಹ ದಳವನ್ನು ಸ್ಥಾಪಿಸಲಾಗಿದೆ ಎಂದು ಬಿಜೆಪಿ ಹೇಳುತ್ತಿದ್ದರೂ, ಕಾಂಗ್ರೆಸ್ ಇದನ್ನು ಅಲ್ಲಗಳೆಯುತ್ತಿತ್ತು. ಆದರೆ ಈಗ ಗೋವಿನ ರುಂಡ ಪತ್ತೆಯಾಗಿದ್ದು, ಗೋ ಹತ್ಯೆ ನಡೆದು, ರಾಜಾರೋಷವಾಗಿ ಸಾಗಾಟ ಮಾಡಿದರೂ ಪೋಲಿಸ್ ಇಲಾಖೆಗೆ ಮಾಹಿತಿ ದೊರಕದೇ ಇರುವುದು ಇಲಾಖೆಯ ವೈಫಲ್ಯವನ್ನು ಜಗಜ್ಜಾಹೀರು ಮಾಡಿದೆ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ್ ಶ್ರೀನಿಧಿ ಹೆಗ್ಡೆ ಹೇಳಿದ್ದಾರೆ.