• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಕಳ-ಸಂಜೀವಿನಿ ಒಕ್ಕೂಟದ ಮಹಿಳೆಯರಿಗೆ ಸ್ವದ್ಯೋಗ ತರಬೇತಿ
ಕಾರ್ಕಳದ ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರಿಗೆ ಸ್ವಾವಲಂಬಿ ಜೀವನಕ್ಕಾಗಿ ಮೂರು ದಿನಗಳ ಅಲಂಕಾರಿಕ ಕ್ಯಾಂಡಲ್, ಫಿನಾಯಿಲ್ ಮತ್ತು ಸಾಬೂನು ತಯಾರಿಕೆ ತರಬೇತಿ ನಡೆಯಿತು.
ಪೌರಕಾರ್ಮಿಕರ ಮೇಲೆ ದೌರ್ಜನ್ಯ 15 ಪ್ರಕರಣ ದಾಖಲು: ಡಿಸಿ ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಹಾಗೂ ದೌರ್ಜನ್ಯ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಪೌರಕಾರ್ಮಿಕ ಸೌಲಭ್ಯಗಳು, ಕಾನೂನುಗಳ ಬಗ್ಗೆ ತಿಳಿಸಿದರು.
ಬಾಲ್ಯದಲ್ಲಿಯೇ ಉತ್ತಮ ಜೀವನ ಕಲ್ಪಿಸಿದರೆ ಸುಸ್ಥಿರ ಸಮಾಜ ಸಾಧ್ಯ: ನ್ಯಾ. ಸೋಮನಾಥ್
ಉಡುಪಿ ತಾ.ಪಂ. ಸಭಾಂಗಣದಲ್ಲಿ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಹಯೋಗದಲ್ಲಿ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಯ ವೈದ್ಯಾಧಿಕಾರಿ, ಸಂಚಾರಿ ಪೊಲೀಸ್ ಸಿಬ್ಬಂದಿಗೆ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಬಾಲನ್ಯಾಯ ಕಾಯ್ದೆ 2015, ತಿದ್ದುಪಡಿ 2021, ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ ಕಾಯ್ದೆ 2012 ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಮತ್ತು ದತ್ತು ಕಾರ್ಯಕ್ರಮದ ಕುರಿತು ತರಬೇತಿ ಕಾರ್ಯಾಗಾರ ನಡೆಯಿತು.
ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ‘ಕತ್ತಲ ಹಾಡು’
ಉಡುಪಿ ಎಂ.ಜಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಎಂ.ಎಲ್. ಸಾಮಗ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಶುಭ ಹಾರೈಸಿದರು. ಕಾಲೇಜಿನ ವರಾಂಡದಲ್ಲಿ ಸುತ್ತಲಿನ ವಿದ್ಯುತ್ ದೀಪಗಳ ಆರಿಸಿ ತುಂಬು ಕತ್ತಲೆಯ ನಡುವೆ 1000 ಸಣ್ಣ ಹಣತೆಗಳನ್ನು ಉರಿಸಿ ಹಾಡು ಹಾಡಲಾಯಿತು.
ಸಿದ್ದರಾಮಯ್ಯ ಸರ್ಕಾರಿ ಸಮಾವೇಶವನ್ನು ಕಾಂಗ್ರೆಸ್ ಸಮಾವೇಶ ಮಾಡಿದ್ರು: ಕೋಟ
ಸಮಾವೇಶದಲ್ಲಿ ಸರ್ಕಾರವನ್ನು ಸಮರ್ಥನೆ ಮಾಡಿಕೊಂಡಿದ್ದರೆ ಯಾವುದೇ ತಪ್ಪು ಇಲ್ಲ, ಆದರೆ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರದ ಖರ್ಚಿನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಾವೇಶವನ್ನು ಮಾಡಿದ್ದಾರೆ ಅದು ತಪ್ಪು ಎಂದು ಕೋಟ ಶ್ರೀನಿವಾಸ್ ಪೂಜಾರಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಡಾ. ಜಿ.ಶಂಕರ್ ಕಾಲೇಜು ಎನ್ಎಸ್ಎಸ್ ವಾರ್ಷಿಕ ಶಿಬಿರ ಸಮಾರೋಪ
ಮಂಗಳೂರು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಗುರುವಾರ ನಗರದ ಬ್ರಹ್ಮಗಿರಿಯ ರೆಡ್‌ ಕ್ರಾಸ್ ಭವನದಲ್ಲಿ ನಡೆಯಿತು.
ನೃತ್ಯ ಕಲೆಯು ಮನಃಶಾಂತಿಯನ್ನು ನೀಡಬಲ್ಲದು: ಡಾ. ಕೆ.ಎಸ್. ಪವಿತ್ರಾ
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್‌ನ ಆಶ್ರಯದಲ್ಲಿ ‘ನೃತ್ಯ ಮತ್ತು ಶಾಂತಿ ಕಲಾವಿದೆ ಮತ್ತು ಮನೋವೈದ್ಯೆಯ ಒಳನೋಟ’ ಎಂಬ ವಿಷಯದ ಕುರಿತು ಉಪನ್ಯಾಸ - ನೃತ್ಯ ಪ್ರದರ್ಶನ ನಡೆಯಿತು. ಖ್ಯಾತ ಮನೋವೈದ್ಯೆ, ನೃತ್ಯ ಕಲಾವಿದೆ, ಲೇಖಕಿ ಡಾ. ಕೆ.ಎಸ್. ಪವಿತ್ರಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಕಾಂಗ್ರೆಸ್ ಬಿಟ್ಟ ಮೇಲೂ ಅದರ ಸಂಪರ್ಕದಲ್ಲಿದ್ದೆ: ಜೆ.ಪಿ. ಹೆಗ್ಡೆ
ನನ್ನ ಜೊತೆ ಬಿಜೆಪಿ ಸೇರಿದ್ದವರೂ ವಾಪಸ್‌ ಬರುತ್ತಾರೆ. ಒಂದೇ ಸಲ ಎಲ್ಲರನ್ನೂ ಕರೆದುಕೊಂಡು ಬರಲು ಸಾಧ್ಯ ಎಂದು ಅನಿಸುವುದಿಲ್ಲ. ಎರಡು ಜಿಲ್ಲೆಯಲ್ಲಿ ಅನೇಕ ಮಂದಿ ಬಿಜೆಪಿಯವರು ನನ್ನ ಜೊತೆ ಬರುತ್ತೇನೆ ಎಂದಿದ್ದಾರೆ. ಅವರಿಂದ ನನ್ನ ರಾಜಕೀಯ ಭವಿಷ್ಯ, ನನ್ನಿಂದ ಅವರ ರಾಜಕೀಯ ಭವಿಷ್ಯ ಎಂದು ನಾನು ಭಾವಿಸುವುದಿಲ್ಲ ಎಂದು ಜೆಪಿ ಹೆಗ್ಡೆ ತಿಳಿಸಿದ್ದಾರೆ.
ಮಣಿಪಾಲ ಕೆಎಂಸಿ: ಗ್ಲುಕೋಮಾ ಡಯಾಗ್ನೋಸ್ಟಿಕ್ಸ್ ಕಾರ್ಯಾಗಾರ
ಡಾ.ಟಿ.ಎಂ.ಎ.ಪೈ ಅವರ 125ನೇ ಜನ್ಮದಿನಾಚರಣೆಯ ಗೌರವಾರ್ಥವಾಗಿ ‘ಮಣಿಪಾಲ್ ಹಾಟ್ಸ್: ಹ್ಯಾಂಡ್ಸ್ ಆನ್ ಟ್ರೈನಿಂಗ್ ಸೆಷನ್ಸ್ - ಗ್ಲುಕೋಮಾ ಡಯಾಗ್ನೋಸ್ಟಿಕ್ಸ್’ ಎಂಬ ಕಾರ್ಯಾಗಾರ ನಡೆಯಿತು. ಉಡುಪಿ ಜಿಲ್ಲಾ ಆಪ್ತಾಲ್ಮಿಕ್ ಸೊಸೈಟಿಯ ಅಧ್ಯಕ್ಷ ಡಾ. ಶ್ರೀನಾಥ್ ಕಾಮತ್, ಕಾರ್ಯಾಗಾರವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಅಯೋಧ್ಯೆಯಲ್ಲಿ ಮಂಡಲೋತ್ಸವ ಪೂರೈಸಿದ ಪೇಜಾವರ ಶ್ರೀಗಳಿಗೆ 17ರಂದು ಸ್ವಾಗತ ಸಮಾರಂಭ
ಜೋಡುಕಟ್ಟೆಯಿಂದ ತೆರೆದ ವಾಹನದಲ್ಲಿ ಶ್ರೀಗಳನ್ನು ನೂರಾರು ವಾಹನಗಳ ಜಾಥಾದೊಂದಿಗೆ ಕೆ.ಎಂ. ಮಾರ್ಗ - ಹಳೆ ಸರ್ವಿಸ್ ಬಸ್ ನಿಲ್ದಾಣ, ಸಂಸ್ಕೃತ ಕಾಲೇಜಿಗೆ ಕರೆತಂದು, ಅಲ್ಲಿಂದ ಕಾಲ್ನಡಿಗೆಯಲ್ಲಿ ರಥಬೀದಿಗೆ ಬಂದು ಶ್ರೀಕೃಷ್ಣದೇವರು, ಶ್ರೀ ಅನಂತೇಶ್ವರ ಶ್ರೀ ಚಂದ್ರಮೌಳೀಶ್ವರ ದೇವರ ದರ್ಶನ ಪಡೆದು ಪೇಜಾವರ ಮಠ ಪ್ರವೇಶಿಸುವರು.
  • < previous
  • 1
  • ...
  • 366
  • 367
  • 368
  • 369
  • 370
  • 371
  • 372
  • 373
  • 374
  • ...
  • 433
  • next >
Top Stories
ಭಾರತೀಯರು ತವರಿಗೆ ಕಳಿಸೋ ಹಣಕ್ಕೆ ಟ್ರಂಪ್‌ ಶೇ.1 ರಷ್ಟು ಟ್ಯಾಕ್ಸ್‌
ನನ್ನ ಪ್ರಾರ್ಥನೆ ವಿಫಲವಾಗಲ್ಲ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌
ಟಿವಿಕೆ ಅಧ್ಯಕ್ಷ, ನಟ ವಿಜಯ್‌ ಸಿಎಂ ಅಭ್ಯರ್ಥಿ; ಬಿಜೆಪಿಜತೆಯಲ್ಲಿ ಮೈತ್ರಿ ಇಲ್ಲ
ಗುಜರಾತ್‌ : ಕೈಗಳಿಗೆ ಕೋಳ ಹಾಕಿ 250 ಬಾಂಗ್ಲನ್ನರ ಗಡೀಪಾರು
ಆಂತರಿಕ ಆಡಿಟ್‌ನಲ್ಲೂ ಎಚ್‌ಸಿಜಿ ಅಕ್ರಮ ಪತ್ತೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved