ಗೃಹ ಲಕ್ಷ್ಮೀಗೆ ಲಕ್ಷ್ಮೀಯವರಿಂದಲೇ ತಡೆ: ಬಿಜೆಪಿ ಮಹಿಳಾ ಮೋರ್ಚಾ ಟೀಕೆಅನಾರೋಗ್ಯದ ಕುಂಟು ನೆಪವೊಡ್ಡಿ ಸರ್ಕಾರದ ಹುಳುಕನ್ನು ಮುಚ್ಚಿ ಹಾಕುವ ಪ್ರಯತ್ನ ಇದಾಗಿದೆ. ಉಪಚುನಾವಣೆ ಸಂದರ್ಭಗಳಲ್ಲಿ ತರಾತುರಿಯಲ್ಲಿ ಹಣ ಹಾಕುವ ವ್ಯವಸ್ಥೆ ಇರುವಾಗ ಬಾಕಿ ಸಮಯದಲ್ಲಿ ತಡವೇಕೆ? ಸಚಿವರ ಆರೋಗ್ಯ ಶೀಘ್ರ ಗುಣಮುಖವಾಗಲಿ ಎಂಬ ಆಶಯ ನಮ್ಮದು ಕೂಡ ಇದೆ. ಹಾಗಂತ ಚುನಾವಣೆ ಸಂದರ್ಭದಲ್ಲಿ ನೀಡಿದ ವಚನಕ್ಕೆ ಬದ್ಧರಾಗಿ ಸಮಯಕ್ಕೆ ಸರಿಯಾಗಿ ರಾಜ್ಯದ ಬಡ ಮಹಿಳೆಯರ ಖಾತೆಗೆ ಹಣ ಜಮಾ ಮಾಡಬೇಕು ಎಂದು ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವಿನಯ ಡಿ. ಬಂಗೇರ ಹೇಳಿದ್ದಾರೆ.