ಉಡುಪಿ: ಪೇಜಾವರ ಮಠದ ಅಧೀನದಲ್ಲಿರುವ ನೀಲಾವರ ಗೋಶಾಲೆಯ ಹೆಸರಿನಲ್ಲಿ ಅಸ್ತಿತ್ವಕ್ಕೆ ಬಂದಿರುವ ನೀಲಾವರ ಗೋಗ್ರಾಸ ತಂಡಕ್ಕೂ ಮಠಕ್ಕೂ ಯಾವುದೇ ಸಂಬಂದ ಇಲ್ಲ ಎಂದು ಪೇಜಾವರ ಮಠದ ಪ್ರಕಟಣೆ ಸ್ಪಷ್ಟಪಡಿಸಿದೆ.ಉಡುಪಿಯ ಭಾರತೀಶ ಜುವೆಲ್ಲರ್ಸ್ ನ ಶಶಿಧರ ಭಟ್ ಎಂಬವರು ನೀಲಾವರ ಗೋಗ್ರಾಸ ಸೇವಾ ತಂಡ ಎಂಬ ತಂಡವನ್ನು ರಚಿಸಿದ್ದು, ಸಾರ್ವಜನಿಕ ದೇಣಿಗೆಗಳನ್ನೂ ಪಡೆದಿರುವ ಮಾಹಿತಿ ತಿಳಿದುಬಂದಿದೆ. ಪೇಜಾವರ ಶ್ರೀಗಳು ಹಾಗೂ ನೀಲಾವರ ಗೋಶಾಲೆಯ ಗೋವರ್ಧನಗಿರಿ ಟ್ರಸ್ಟ್ ನ ಗಮನಕ್ಕೆ ಬಾರದೆ ಅನಧಿಕೃತವಾಗಿ, ಶ್ರೀಪಾದರ ಫೋಟೋ ಹಾಗೂ ಶ್ರೀಮಠದ ಹೆಸರನ್ನು ಮನವಿಗಳಲ್ಲಿ ಬಳಸಿ ದೇಣಿಗೆ ಸಂಗ್ರಹ ನಡೆಸಿದ್ದಾರೆ. ಅವರನ್ನು ತಕ್ಷಣದಿಂದ ನೀಲಾವರ ಗೋಶಾಲೆಯ ಟ್ರಸ್ಟ್ ನಿಂದ ವಜಾ ಮಾಡಲಾಗಿದೆ. ಅಲ್ಲದೆ ಗೋಶಾಲೆಗೂ ಅವರ ತಂಡಕ್ಕೂ ಯಾವುದೇ ಸಂಬಂಧವಿಲ್ಲ. ಈ ತಂಡದಿಂದ ಸಾರ್ವಜನಿಕರು ಮೋಸ ಹೋಗಬಾರದಾಗಿ ಪೇಜಾವರ ಮಠದ ಗೋವರ್ಧನಗಿರಿ ಟ್ರಸ್ಟ್ ಪ್ರಕಟಣೆ ತಿಳಿಸಿದೆ.

ಗೋಶಾಲೆಗೆ ದೇಣಿಗೆ ನೀಡುವವರು ಟ್ರಸ್ಟ್ ನ ಅಧಿಕೃತ ರಶೀದಿಯನ್ನು ಕಡ್ಡಾಯವಾಗಿ ಪಡೆಯಬೇಕೆಂದು ಕೋರಲಾಗಿದೆ.