ಉಡುಪಿಯ ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಒಂದಾದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣೈ ಹಾಗೂ ಅಧ್ಯಕ್ಷರಾಗಿ ಪ್ರೊ. ಶಂಕರ್ ಪುನರ್ ಆಯ್ಕೆ ಆಗಿರುತ್ತಾರೆ.

ಉಡುಪಿ: ಉಡುಪಿಯ ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಒಂದಾದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣೈ ಹಾಗೂ ಅಧ್ಯಕ್ಷರಾಗಿ ಪ್ರೊ. ಶಂಕರ್ ಪುನರ್ ಆಯ್ಕೆ ಆಗಿರುತ್ತಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಶಿಲ್ಪಾ ಜೋಶಿ, ಕಾರ್ಯದರ್ಶಿಯಾಗಿ ಪೂರ್ಣಿಮಾ ಜನಾರ್ದನ್, ಜನಾರ್ದನ ಹಾವಂಜೆ, ಕೋಶಾಧಿಕಾರಿಯಾಗಿ ರಾಜೇಶ್ ಭಟ್ ಪಣಿಯಾಡಿ, ಕಾನೂನು ಸಲಹೆಗಾರರಾಗಿ ಶಶಿರಾಜ್ ಕಾವೂರು, ಸಂಚಾಲಕರಾಗಿ ರವಿರಾಜ್ ಹೆಚ್. ಪಿ ಆಯ್ಕೆಗೊಂಡರು.ಉಪಾಧ್ಯಕ್ಷರಾಗಿ ಮರವಂತೆ ನಾಗರಾಜ ಹೆಬ್ಬಾರ್, ಪ್ರಭಾವತಿ ವಿ. ಶೆಣೈ, ಸಂಧ್ಯಾ ಶೆಣೈ, ಜೀವನ್ ರಾಂ ಸುಳ್ಯ , ವಿಘ್ನೇಶ್ವರ ಅಡಿಗ, ಆಸ್ಟ್ರೋ ಮೋಹನ್, ಡಾ. ಭಾರ್ಗವಿ ಐತಾಳ್, ಮನೋಹರ್ ನಾಯಕ್, ಮಧುಸೂದನ್ ಹೇರೂರು, ಸುಗುಣ ಸುವರ್ಣ, ಜನಾರ್ದನ ಕೊಡವೂರು, ಉಮೇಶ್ ನಾಯಕ್, ಗೌರವ ಸಲಹೆಗಾರರಾಗಿ ಜಯಕರ್ ಶೆಟ್ಟಿ ಇಂದ್ರಾಳಿ , ರವೀಂದ್ರ ಪೂಜಾರಿ ತೆಳ್ಳಾರು, ರಾಜಗೋಪಾಲ್ ಬಲ್ಲಾಳ, ಡಾ. ಸುರೇಶ್ ಶೆಣೈ, ಡಾ. ವಿರೂಪಾಕ್ಷ ದೇವರಮನೆ, ಡಾ. ವಿಜಯೇಂದ್ರ ವಸಂತ್, ಎಂ.ಎಸ್ ಭಟ್, ಶಂಕರ ನಾರಾಯಣ ಕೊಡಂಚ, ಮನೋಹರ್ ಶೆಟ್ಟಿ ತೊನ್ಸೆ ಆಯ್ಕೆಯಾಗಿದ್ದಾರೆ.