ಸಾರಾಂಶ
ಕನ್ನಡಪ್ರಭ ವಾರ್ತೆ, ಉಡುಪಿಬಿಜೆಪಿ ಮಹಾ ಶಕ್ತಿ ಕೇಂದ್ರ ಉದ್ಯಾವರ ವತಿಯಿಂದ ಬುಧವಾರ ಇಲ್ಲಿನ ಉದ್ಯಾವರ ಸೌಂದರ್ಯ ಹಾಲ್ ನಲ್ಲಿ ಹಮ್ಮಿಕೊಳ್ಳಲಾದ ಉದ್ಯಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ‘ಬಿಜೆಪಿ ಕಾರ್ಯಕರ್ತರ ಸಮಾವೇಶ ಹಾಗೂ ಅಭಿನಂದನಾ ಕಾರ್ಯಕ್ರಮ’ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನು ಮತ್ತೊಮ್ಮೆ ದೇಶದ ಪ್ರದಾನಿಯನ್ನಾಗಿ ಮಾಡಬೇಕಾಗಿದೆ. ಅದಕ್ಕಾಗಿ ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಗ್ರಾಮ ಮಟ್ಟದಲ್ಲಿಯೇ ಕಾರ್ಯಕರ್ತರು ಮನೆಮನೆಗೆ ಭೇಟಿ ನೀಡಿ ಕೇಂದ್ರ ಸರ್ಕಾರದ ಸಾಧನೆಗಳನ್ನು ತಿಳಿಹೇಳಿ ಕಾರ್ಯಪ್ರವೃತ್ತರಾಗಬೇಕು ಎಂದವರು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಇತ್ತೀಚೆಗೆ ನಿಯೋಜಿತರಾದ ಜಿತೇಂದ್ರ ಶೆಟ್ಟಿ ಅವರನ್ನು ಉದ್ಯಾವರ ಮಹಾಶಕ್ತಿ ಕೇಂದ್ರದ ವತಿಯಿಂದ ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಎಸ್.ಸಿ ಮೋರ್ಚಾ ಉಪಾಧ್ಯಕ್ಷರಾದ ದಿನಕರ್ ಬಾಬು, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಜಿಲ್ಲಾ ಬಿಜೆಪಿ ವಕ್ತಾರರಾದ ವಿಜಯ್ ಕುಮಾರ್, ಕಾಪು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ಸಂದೀಪ್ ಕಲ್ಯಾ, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಾರ್ಯದರ್ಶಿಗಳಾದ ರಾಜೇಶ್ ಕುಂದರ್, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಸಚಿನ್, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ, ಉದ್ಯಾವರ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರವಿ ಕೋಟ್ಯಾನ್ ಮುಂತಾದವರು ಉಪಸ್ಥಿತರಿದ್ದರು.