ಸಚಿವ ಜಮೀರ್‌ ನೇತೃತ್ವದಲ್ಲಿ ಜಮೀನು ಕಬಳಿಸುವ ಹುನ್ನಾರ: ಶಾಸಕ ಜನಾರ್ದನ ರೆಡ್ಡಿ

| Published : Nov 23 2024, 12:33 AM IST

ಸಚಿವ ಜಮೀರ್‌ ನೇತೃತ್ವದಲ್ಲಿ ಜಮೀನು ಕಬಳಿಸುವ ಹುನ್ನಾರ: ಶಾಸಕ ಜನಾರ್ದನ ರೆಡ್ಡಿ
Share this Article
  • FB
  • TW
  • Linkdin
  • Email

ಸಾರಾಂಶ

ಈಗಿನ ಕೇಂದ್ರ ಸರಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಈ ಮುನ್ನ ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ಭೂಮಿ ಕಬಳಿಸಲು ಹೊರಟಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದರು.

ಕೊಪ್ಪಳ: ಈಗಿನ ಕೇಂದ್ರ ಸರಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಈ ಮುನ್ನ ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ಭೂಮಿ ಕಬಳಿಸಲು ಹೊರಟಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದರು.

ನಗರದಲ್ಲಿ ಜರುಗಿದ ಬಿಜೆಪಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಸಿಎಂ ಸಿದ್ದರಾಮಯ್ಯ ಹೋರಾಟಕ್ಕೆ ಮಣಿದು ವಕ್ಫ್‌ಗಾಗಿ ನೀಡುವ ನೋಟಿಸ್ ಹಿಂಪಡೆದಿದ್ದಾಗಿ ಮೌಖಿಕವಾಗಿ ಹೇಳಿದ್ದಾರೆ. ಆದರೆ, ಅಧಿಕೃತ ಆದೇಶ ಹೊರಡಿಸಿಲ್ಲ. ಈ ಚುನಾವಣೆಯ ನಂತರ ಮತ್ತೆ ನೋಟಿಸ್‌ ನೀಡಿ ಕಬಳಿಸಲು ಸರಕಾರ ಮುಂದಾಗಿದೆ ಎಂದು ಆರೋಪಿಸಿದರು.

ಸರ್ಕಾರ ವಕ್ಫ್ ಮಸೂದೆ ದುರುಪಯೋಗ ಮಾಡಿಕೊಂಡು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಜಮೀರ್ ಎನ್ನುವ ೪೨೦ ಸಚಿವನನ್ನು ಇಟ್ಟುಕೊಂಡು ಎಲ್ಲ ಭೂಮಿ ವಶಪಡಿಸಿಕೊಳ್ಳುವ ತರಾತುರಿಯಲ್ಲಿ ಸಾವಿರಾರು ಎಕರೆಗೆ ವಕ್ಪ್ ಹೆಸರು ಸೇರಿಸಿದೆ. ಚುನಾವಣೆಯಲ್ಲಿ ಹೊಡೆತ ಬೀಳುವ ಭಯದಲ್ಲಿ ಸಿಎಂ ಮೌಖಿಕವಾಗಿ ನೋಟಿಸ್ ಹಿಂಪಡೆಯುವ ಹೇಳಿಕೆ ನೀಡಿದ್ದಾರೆ. ಅದರಿಂದ ಏನೂ ಆಗಲ್ಲ, ಕೂಡಲೇ ತುರ್ತು ಕ್ಯಾಬಿನೆಟ್ ಮೀಟಿಂಗ್ ಮಾಡಿ ರದ್ದುಗೊಳಿಸಬೇಕಿತ್ತು. ಆದರೆ, ಮೌಖಿಕವಾಗಿ ಹೇಳುವ ಮೂಲಕ ರೈತರ ಶಾಪಕ್ಕೆ ಗುರಿಯಾಗುತ್ತಾರೆ ಎಂದು ಸಿಎಂ ವಿರುದ್ಧ ಹರಿಹಾಯ್ದರು.

ಚನಾವಣೆಯಲ್ಲಿ ನಾವು ಕೇವಲ ಮೈಕ್‌ನಲ್ಲಿ ಅನೌನ್ಸ್ ಮಾಡ್ಕೊಂಡು ಪ್ರಚಾರ ಮಾಡಿದ್ದಿವಿ. ಸಿಎಂ ಉಪ ಚುನಾವಣಾ ಪೂರ್ವದಲ್ಲಿ ₹೧೩೦೦ ಕೋಟಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಾರೆ. ಸಿಎಂ ಹಳ್ಳಿ ಹಳ್ಳಿಯಲ್ಲಿ ಪ್ರಚಾರ ಮಾಡಿದ್ದಾರೆ. ಚುನಾವಣೆಯಲ್ಲಿ ಹಣದ ಹೊಳೆ ಹರಿದಿರುವುದನ್ನು ಎಲ್ಲರೂ ನೋಡಿದ್ದಾರೆ ಎಂದು ಆರೋಪಿಸಿದರು.