ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಸಂಭ್ರಮ-೨೦೨೫ ನಮ್ಮೂರ ಹಬ್ಬ ಹಾಗೂ ವಿವಿಧ ಮಳಿಗೆಗಳನ್ನು ಶುಕ್ರವಾರ ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಿ, ಮಕ್ಕಳಿಗೆ ಬಹುಮಾನ ವಿತರಿಸಿದರು.
ಉ.ಕ. ಜಿಲ್ಲೆ ಅಂಕೋಲಾ ತಾಲೂಕಿನ ಕೇಣಿ ಬಂದರು ನಿರ್ಮಾಣ ಯೋಜನೆ ಕೈಬಿಡಲು ಜನತೆ ನಡೆಸುತ್ತಿರುವ ಬೃಹತ್ ಜನಾಂದೋಲನಕ್ಕೆ ಮಾನ್ಯತೆ ನೀಡಬೇಕು ಎಂದು ವೃಕ್ಷಲಕ್ಷ ಆಂದೋಲನ ಸರ್ಕಾರವನ್ನು ಒತ್ತಾಯಿಸಿದೆ.
ಭಟ್ಕಳ ತಾಲೂಕಿನ ಬೆಳಕೆ ಗ್ರಾಪಂ ವ್ಯಾಪ್ತಿಯ ಭಂಟಗೊಂಡ ಮಹಾಸತಿ ದೇವಸ್ಥಾನದ ಆವರಣದಲ್ಲಿ ಅರಣ್ಯವಾಸಿಗಳ ಕಾನೂನು ಜಾಗೃತಿ ಜಾಥಾದ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಂಗ ಸಂಸ್ಥೆಗಳು ಯಾವುದೂ ಇಲ್ಲ. ಬೆಂಗಳೂರಿನಲ್ಲಿ ಮಾತ್ರ ನಮ್ಮ ಕಚೇರಿಯಿದೆ. ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಅಂಗ ಸಂಸ್ಥೆಗಳನ್ನು ಮಾಡುವಂತೆ ಸಭೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮಾನವ ಹಕ್ಕುಗಳ ಆಯೋಗದ ಸದಸ್ಯ ಎಸ್.ಕೆ. ವಂಟಿಗೋಡಿ ಹೇಳಿದರು.
ಹಳಿಯಾಳ ಪಟ್ಟಣದ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ 12ನೇ ಕನ್ನಡ-ಹಬ್ಬಕ್ಕೆ ಕನ್ನಡಪ್ರಭ ಉಪಸಂಪಾದಕಿ ದಿವ್ಯಾ ಹೆಗಡೆ ಕಬ್ಬಿನಗದ್ದೆ ಚಾಲನೆ ನೀಡಿ, ದಿಕ್ಸೂಚಿ ಭಾಷಣ ಮಾಡಿದರು.
ಇಲ್ಲಿನ ಬಂಕಿಕೊಡ್ಲದ ಕಾಶಿ ವಿಶ್ವನಾಥ ದೇವಾಲಯದ ರಥೋತ್ಸವ ಚಂಪಾಷಷ್ಟಿ ದಿನವಾದ ವಿಜೃಂಭಣೆಯಿಂದ ಜರುಗಿತು.
ಚೌತನಿಯ ಶರಾಬಿ ಹೊಳೆಯ ಸ್ವಚ್ಛತಾ ಕಾರ್ಯವನ್ನು 2026ರ ಜನವರಿಯಲ್ಲಿ ಆರಂಭಿಸಲಾಗುತ್ತಿದ್ದು, ಮಾರ್ಚ್ ವೇಳೆಗೆ ಕೆಲಸ ಪೂರ್ಣಗೊಳಿಸಲಾಗುವುದು.
ಕಷ್ಟದ ಸಂದರ್ಭಗಳಲ್ಲಿ ಸಂತ್ರಸ್ತರಿಗೆ ಸಾಂತ್ವನ ಮತ್ತು ಬೆಂಬಲ ನೀಡುವುದು ಬಹು ದೊಡ್ಡ ಕಾಯಕವಾಗಿದ್ದು, ಅಂತಹ ಕಾರ್ಯವನ್ನು ದೇವರಾಯ ನಾಯ್ಕ ಜಲವಳ್ಳಿ ಮಾಡಿ ಬಂದಿದ್ದರಿಂದ ಸದಾ ಈ ಭಾಗದ ಜನ ಅವರನ್ನು ನೆನಪಿಸಿಕೊಳ್ಳುತ್ತಾರೆ.
ಅಂದಾಜು ಪಟ್ಟಿಯು ಪ್ರಸ್ತುತ ಬ್ಯಾಂಕ್ ಖಾತೆಯಲ್ಲಿ ಇರುವ ಮೊತ್ತಕ್ಕಿಂತಲೂ ಅಧಿಕವಾದಲ್ಲಿ ಹೆಚ್ಚುವರಿ ಮೊತ್ತವನ್ನು ಇತರೇ ಇಲಾಖೆಗಳ ಮೂಲಕ ಒದಗಿಸಲು ಕ್ರಮ ಕೈಗೊಳ್ಳಲಾಗುವುದು.
ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಟಿಬೆಟಿಯನ್ ಧರ್ಮಗುರು ದಲೈಲಾಮಾ ಡಿ. 12ರಂದು ಇಲ್ಲಿಯ ಟಿಬೆಟಿಯನ್ ಕಾಲನಿಗೆ ಆಗಮಿಸುತ್ತಿರುವ ಹಿನ್ನೆಲೆ ಅವರ ಸ್ವಾಗತಕ್ಕೆ ಟೆಬೆಟಿಯನ್ ಬಡಾವಣೆಯಲ್ಲಿ ಭರದ ಸಿದ್ಧತೆ ನಡೆದಿದೆ.
uttara-kannada