ಸಂಗೀತ ಸಾಹಿತ್ಯದ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲೂ ಕನ್ನಡ ಡಿಂಡಿಮ ಮೊಳಗಿಸಿದ ದೇಸಿ ಪ್ರತಿಭೆಗಳ ಕಲಾ ತಂಡ ಕದಂಬ ಕಲಾ ಸಾಂಸ್ಕೃತಿಕ ಪರಿಷತ್ತಿನಿಂದ ನ.27ರಂದು ನಗರದ ಭಾರತ ಸೇವಾದಳದ ಸಭಾಭವನದಲ್ಲಿ ಸುಗಮ ಸಂಗೀತ ಪರಿಷತ್ತಿನ ಸಹಭಾಗಿತ್ವದಲ್ಲಿ ರಾಜ್ಯೋತ್ಸವ-ನಿತ್ಯೋತ್ಸವ, ಸಾಲುಮರದ ತಿಮ್ಮಕ್ಕನವರಿಗೆ ಭಾವನಮನ ಎನ್ನುವ ಭಾವನಾತ್ಮಕ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.