ಯಲ್ಲಾಪುರ ತಾಲೂಕಿನ ಹಿರೇಸರದ ಪ್ರಮುಖ ಸಹಕಾರಿ ಜಿ.ಎನ್. ಹೆಗಡೆ ಅವರಿಗೆ ಹವ್ಯಕ ಸಾಧಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅಖಿಲ ಹವ್ಯಕ ಮಹಾಸಭಾವು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ 3 ದಿನಗಳ 3ನೆಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಹೆಗಡೆ ಅವರನ್ನು ಗೌರವಿಸಲಾಯಿತು.